ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ: ಗುಂಪನ್ನು ಚದುರಿಸಲು ಪೊಲೀಸರಿಂದ ಅಶ್ರುವಾಯು ಪ್ರಯೋಗ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಣಿಪುರ ಹಿಂಸಾಚಾರದಲ್ಲಿ ಹೊತ್ತಿ ಉರಿಯುತ್ತಿದೆ. ಇಂದು ಮತ್ತೆ ಇಂಫಾಲ್ ಪಶ್ಚಿಮ ಜಿಲ್ಲೆಯಲ್ಲಿ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಗ್ರಾಮಸ್ಥರ ಮೇಲೆ ಗುಂಡಿನ ದಾಳಿಯಲ್ಲಿ ಒಬ್ಬರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ.

ಇಂಫಾಲದಲ್ಲಿರುವ ಬಿಜೆಪಿಯ ಪ್ರಾದೇಶಿಕ ಕಚೇರಿ ಬಳಿ ನೆರೆದಿದ್ದ ಗುಂಪನ್ನು ಚದುರಿಸಲು ಪೊಲೀಸರು ಹಲವು ಸುತ್ತಿನ ಅಶ್ರುವಾಯು ಸಿಡಿಸಿದ್ದಾರೆ.

ಇತ್ತ ಜನರನ್ನು ಪರಿಹಾರ ಶಿಬಿರಗಳಲ್ಲಿ ಭೇಟಿ ಮಾಡಲು ಚುರಾಚಂದ್ಪುರಕ್ಕೆ ತೆರಳುತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಬೆಂಗಾವಲು ವಾಹನದ ಮೇಲೆ ದಾಳಿ ಭೀತಿಯಿಂದ ಪೊಲೀಸರು ಬಿಷ್ಣುಪುರದಲ್ಲಿ ತಡೆದಿದ್ದಾರೆ. ತದನಂತರ ರಾಜ್ಯಸರ್ಕಾರದ ಹೆಲಿಕಾಪ್ಟರ್ ನಲ್ಲಿ ಚುರಚಂದಪುರಕ್ಕೆ ರಾಹುಲ್ ಗಾಂಧಿ ತೆರಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!