ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಂದು ಲೋಕಸಭಾ ಚುನಾವಣೆಯ ಮೊದಲ ದಿನವೇ ಸಮಸ್ಯೆಗಳು ಎದುರಾಗಿದೆ.
ಇದರ ನಡುವೆ ಪಶ್ಚಿಮ ಬಂಗಾಳದಲ್ಲಿಅಹಿತರ ಘಟನೆಯೊಂದು ನಡೆದಿದ್ದು, ಕೂಚ್ಬೆಹಾರ್ನ ಚಂದ್ಮರಿ ಗ್ರಾಮದಲ್ಲಿ ಕಲ್ಲು ತೂರಾಟ ನಡೆಸಿ ಮತದಾನ ಮಾಡಲು ಅಡ್ಡಿ ಪಡಿಸಲಾಗುತ್ತಿದೆ ಎಂದು ಹೇಳಲಾಗಿದೆ.
ಪಶ್ಚಿಮ ಬಂಗಾಳದ ಕೂಚ್ ಬೆಹಾರ್, ಅಲಿಪುರ್ದವಾರ್ಸ್ ಮತ್ತು ಜಲ್ಪೈಗುರಿ ಲೋಕಸಭಾ ಕ್ಷೇತ್ರಗಳಲ್ಲಿ ಬೆಳಗ್ಗೆಯಿಂದ ಶಾಂತಿಯುತವಾಗಿ ಮತದಾನ ನಡೆಯುತ್ತಿದೆ ಎಂದು ಚುನಾವಣಾಧಿಕಾರಿಯೊಬ್ಬರು ತಿಳಿಸಿದ್ದರು.
ಆದರೆ ಇದೀಗ ಕೂಚ್ಬೆಹಾರ್ ಕ್ಷೇತ್ರದ ಈ ಕಲ್ಲು ತೂರಾಟ ನಡೆಸಲಾಗಿದೆ ಎಂದು ವರದಿಯಾಗಿದೆ. ಬೆಳಗ್ಗೆ 7 ಗಂಟೆಗೆ ಮತದಾನ ಆರಂಭವಾಗಿತ್ತು. ಇನ್ನು ಕೂಚ್ ಬೆಹಾರ್, ಅಲಿಪುರ್ದವಾರ್ಸ್ ಮತ್ತು ಜಲ್ಪೈಗುರಿ ಕ್ಷೇತ್ರದಲ್ಲಿ ಕೇಂದ್ರ ಪಡೆಗಳ ಜೊತೆಗೆ ಒಟ್ಟು 2,454 ರಾಜ್ಯ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಆದರೂ ಅಹಿತಕರ ಘಟನೆ ನಡೆದಿದೆ.