ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………….
ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಅಸ್ಸಾಂ ನ ಭೂಮಿಯನ್ನು ಅತಿಕ್ರಮಣದಿಂದ ರಕ್ಷಿಸಲು ಲೈಲಾಪುರದಲ್ಲಿ ಬೀಡುಬಿಟ್ಟಿರುವ ಸರ್ಕಾರಿ ಅಧಿಕಾರಿಗಳ ಮೇಲೆ ಮಿಜೋರಾಂನ ಕೆಲ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿ, ದಾಳಿ ಮಾಡಿದ್ದಾರೆ.
ಪೊಲೀಸ್ ಸಿಬ್ಬಂದಿ ಹಾಗೂ ಹಲವು ಜನರ ಗುಂಪು ಸಂಘರ್ಷದಲ್ಲಿ ತೊಡಗಿರುವ ವಿಡಿಯೋವನ್ನು ಶೇರ್ ಮಾಡಿಕೊಂಡ ಮಿಜೋರಾಂ ಮುಖ್ಯಮಂತ್ರಿ ಜೊರಾಮ್ತಂಗ, ಗೃಹ ಸಚಿವ ಅಮಿತ್ ಶಾ ಅವರನ್ನು ಟ್ಯಾಗ್ ಮಾಡಿ, ಈ ವಿಚಾರದಲ್ಲಿ ಹಸ್ತಕ್ಷೇಪ ಮಾಡಿ. ಕೂಡಲೇ ಸಂಘರ್ಷ ನಿಲ್ಲಬೇಕು ಎಂದು ಮನವಿ ಮಾಡಿದ್ದಾರೆ.
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರೂ ಕೂಡ ಸಂಘರ್ಷ, ಗಲಭೆಯ ವಿಡಿಯೋ ಶೇರ್ ಮಾಡಿಕೊಂಡಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರನ್ನು ಟ್ಯಾಗ್ ಮಾಡಿದ್ದಾರೆ. ಅಸ್ಸಾಂ-ಮಿಜೋರಾಂ ಗಡಿಯಲ್ಲಿ ಗಲಭೆ ನಡೆಯುತ್ತಿದೆ. ದಯವಿಟ್ಟು ಗಮನಿಸಿ ಎಂದಿದ್ದಾರೆ. ಇನ್ನು ಮಿಜೋರಾಂ ಮುಖ್ಯಮಂತ್ರಿಯನ್ನು ಟ್ಯಾಗ್ ಮಾಡಿರುವ ಅಸ್ಸಾಂ ಸಿಎಂ ಹೇಮಂತ್ ಬಿಸ್ವಾ ಶರ್ಮಾ, ಕೊಲಾಸಿಬ್ ಎಸ್ಪಿಯನ್ನೇ ದೂರಿದ್ದಾರೆ.
ಮಿಜೋರಾಂನ ಮೂರು ಜಿಲ್ಲೆಗಳಾದ ಐಜಾಲ್, ಕೊಲಾಸಿಬ್ ಮತ್ತು ಮಾಮಿತ್ಗಳು, ಅಸ್ಸಾಂನ ಕ್ಯಾಚರ್, ಹೈಲಕಂಡಿ ಮತ್ತು ಕರಿಮಗಂಜ್ ಜಿಲ್ಲೆಗಳೊಂದಿಗೆ 164.6 ಕಿ.ಮೀ ಉದ್ದದ ಅಂತರ ರಾಜ್ಯ ಗಡಿಯನ್ನು ಹಂಚಿಕೊಂಡಿವೆ. ಎರಡೂ ರಾಜ್ಯಗಳೂ ಪರಸ್ಪರ ಭೂಮಿ ಅತಿಕ್ರಮಣದ ಆರೋಪ ಮಾಡಿಕೊಳ್ಳುತ್ತಿವೆ. ಅದರಲ್ಲೂ ಕಳೆದ ತಿಂಗಳು, ಮಿಜೋರಾಂನ ವೈರೆಂಗ್ಟೆ ಗಡಿಯಿಂದ 5 ಕಿಮೀ ದೂರದಲ್ಲಿರುವ ಐಟ್ಲಾಂಗ್ನ್ನು ವಶಪಡಿಸಿಕೊಂಡ ಬಳಿಕ ಗಲಾಟೆ ಇನ್ನಷ್ಟು ಅತಿರೇಕಕ್ಕೆ ಹೋಗಿದೆ ಎಂದು ಮಿಜೋರಾಂ ಪೊಲೀಸರು ತಿಳಿಸಿದ್ದಾರೆ.
Honble @ZoramthangaCM ji , Kolasib ( Mizoram) SP is asking us to withdraw from our post until then their civilians won't listen nor stop violence. How can we run government in such circumstances? Hope you will intervene at earliest @AmitShah @PMOIndia pic.twitter.com/72CWWiJGf3
— Himanta Biswa Sarma (@himantabiswa) July 26, 2021