ಹೊಸ ದಿಗಂತ ವರದಿ, ಶಿವಮೊಗ್ಗ:
ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಗರದಲ್ಲಿ ಗುರವಾರ ಸಂಜೆ ‘ವಿರಾಟಪುರ ವಿರಾಗಿ’ ಸಿನೆಮಾ ವೀಕ್ಷಿಸಿದರು.
ನಗರದ ವೀರಭದ್ರೇಶ್ವರ ಚಿತ್ರ ಮಂದಿರದಲ್ಲಿ ಹಾನಗಲ್ ಕುಮಾರಸ್ವಾಮಿಗಳ ಜೀವನ ಆಧಾರಿತ ‘ವಿರಾಟಪುರ ವಿರಾಗಿ’ ಚಿತ್ರ ಪ್ರದರ್ಶನ ನಡೆಯುತ್ತಿದೆ. ಚಿತ್ರದ ಬಗ್ಗೆ ಸಾಕಷ್ಟು ಒಳ್ಳೆಯ ಅಭಿಪ್ರಾಯಗಳು ಕೇಳಿಬರುತ್ತಿವೆ. ಈ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರು ಕುಟುಂಬ ಸಮೇತರಾಗಿ ಚಿತ್ರ ಮಂದಿರಕ್ಕೆ ತೆರಳಿ ಚಿತ್ರ ವೀಕ್ಷಿಸಿದರು.
ಈ ವೇಳೆ ಬಿಳಕಿ ಹಿರೇಮಠದ ಶ್ರೀ ರಾಚೋಟೇಶ್ವರ ಸ್ವಾಮೀಜಿ, ಪುತ್ರಿ ಅರುಣಾದೇವಿ, ಸೊಸೆ ತೇಜಸ್ವಿನಿ ರಾಘವೇಂದ್ರ, ಬಿಜೆಪಿ ಕಾರ್ಯಕರ್ತರು ಜೊತೆಗಿದ್ದರು.