Tuesday, October 3, 2023

Latest Posts

ವಿಶಾಖಪಟ್ಟಣ-ಸಿಕಂದರಾಬಾದ್ ವಂದೇ ಭಾರತ್ ಎಕ್ಸ್‌ಪ್ರೆಸ್ ರದ್ದು: ಮತ್ತೊಂದು ರೈಲು ವ್ಯವಸ್ಥೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ವಿಶಾಖಪಟ್ಟಣದಿಂದ ಸಿಕಂದರಾಬಾದ್‌ಗೆ ಹೋಗಬೇಕಿದ್ದ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲನ್ನು ತಾಂತ್ರಿಕ ಕಾರಣಗಳಿಂದ ರದ್ದುಗೊಳಿಸಲಾಗಿದೆ.

ವಂದೇ ಭಾರತ್ ಎಕ್ಸ್‌ಪ್ರೆಸ್ ಗುರುವಾರ ಬೆಳಿಗ್ಗೆ 5:45 ಕ್ಕೆ ವಿಶಾಖಪಟ್ಟಣದಿಂದ ಹೊರಡಬೇಕಿತ್ತು. ಆದರೆ ರೈಲು ರದ್ದಾದ ಕಾರಣ ಪರ್ಯಾಯವಾಗಿ ಮತ್ತೊಂದು ರೈಲಿನ ವ್ಯವಸ್ಥೆ ಮಾಡಲಾಗಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದರು.

ಪರ್ಯಾಯ ರೈಲು ಬೆಳಗ್ಗೆ 7 ಗಂಟೆಗೆ ವಿಶಾಖಪಟ್ಟಣದಿಂದ ಸಿಕಂದರಾಬಾದ್‌ಗೆ ಹೊರಟಿತು. ಸಂಪೂರ್ಣ ಮಾಹಿತಿಗಾಗಿ ಆಯಾ ರೈಲು ನಿಲ್ದಾಣಗಳಲ್ಲಿರುವ ವಿಚಾರಣಾ ಕೇಂದ್ರಗಳು ಮತ್ತು ಅಧಿಕಾರಿಗಳನ್ನು ಸಂಪರ್ಕಿಸಲು ಸೂಚಿಸಲಾಗಿದೆ. ವಂದೇ ಭಾರತ್ ರೈಲಿಗೆ ಟಿಕೆಟ್ ಕಾಯ್ದಿರಿಸಿದ ಪ್ರಯಾಣಿಕರು ಈ ರೈಲಿಗೆ ಹತ್ತಬೇಕು. ಪ್ರಯಾಣಿಕರಿಗೆ ಆಗಿರುವ ತೊಂದರೆಗೆ ರೈಲ್ವೆ ಇಲಾಖೆ ವಿಷಾದ ವ್ಯಕ್ತಪಡಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!