ಹೊಸದಿಗಂತ ವರದಿ, ವಿಜಯನಗರ:
ನೂತನ ಜಿಲ್ಲೆಯಾದ ಬಳಿಕ ನಗರದ ಡ್ಯಾಮ್ ರಸ್ತೆಯಲ್ಲಿ ನೂತನವಾಗಿ ನಿರ್ಮಿಸಿರುವ ಜಿಲ್ಲಾಧಿಕಾರಿಗಳ ಕಚೇರಿಗೆ ಮುಜರಾಯಿ, ಹಜ್ ಮತ್ತು ವಕ್ಫ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಅಣ್ಣಾಸಾಹೇಬ ಜೊಲ್ಲೆ ಅವರು ಗುರುವಾರ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಪ್ರವಾಸೋದ್ಯಮ ಹಾಗೂ ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಆನಂದ್ ಸಿಂಗ್, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿ ಬಾಬು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬೋಯರ್ ಹರ್ಷಲ್ ನಾರಾಯಣರಾವ್, ಅಪರ ಜಿಲ್ಲಾಧಿಕಾರಿ ಅನುರಾಧ ಕೆ.ಸೇರಿದಂತೆ ಇತರರು ಉಪಸ್ತಿತರಿದ್ದರು.
ಹಳೆಯ ಟಿಎಸ್ಪಿ ಕಟ್ಟಡವನ್ನು ನವೀಕರಿಸಿ ನಿರ್ಮಿಸಿದ್ದ ಕಟ್ಟಡವನ್ನು ಸಾಂಕೇತಿವಾಗಿ ಸಚಿವರು ಈ ಹಿಂದೆ ಉದ್ಘಾಟಿಸಿದ್ದರು. ನವೀಕರಣ ಕಾರ್ಯ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸಚಿವರು ಗುರುವಾರ ಲೋಕಾರ್ಪಣೆಗೊಳಿಸಿದರು.