ವಿಜಯನಗರ, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ ಆದೇಶ ರದ್ದು

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯ ಸರ್ಕಾರದಿಂದ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಆನಂದ್ ಸಿಂಗ್ ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾಗಿ ಶಶಿಕಲಾ ಜೊಲ್ಲೆ ನೇಮಿಸಿ ಆದೇಶಕ್ಕೆ ಬ್ರೇಕ್ ಬಿದ್ದಿದ್ದು, ಇಂದು ಈ ಆದೇಶವನ್ನು ರದ್ದು ಮಾಡಿಲಾಗಿದೆ.
ರಾಜ್ಯ ಸರ್ಕಾರದಿಂದ ಕೊಪ್ಪಳ ಜಿಲ್ಲಾ ಉಸ್ತುವಾರಿಯಾಗಿದ್ದಂತ ಆನಂದ್ ಸಿಂಗ್ ಬದಲಾವಣೆ ಮಾಡಿ, ವಿಜಯನಗರ ಜಿಲ್ಲೆಗೆ ನೇಮಿಸಿ ನಿನ್ನೆ ಆದೇಶ ಹೊರಡಿಸಲಾಗಿತ್ತು. ಕೊಪ್ಪಳ ಜಿಲ್ಲೆಗೆ ಶಶಿಕಲಾ ಜೊಲ್ಲೆ ನೇಮಿಸಲಾಗಿತ್ತು.
ಆದರೆ ಈ ಹಿಂದೆ ಸ್ವಂತ ಜಿಲ್ಲೆಗೆ ಉಸ್ತುವಾರಿಗಳನ್ನು ನೇಮಕ ಮಾಡುವಂತಿಲ್ಲ ಎಂಬುದಾಗಿ ಬಿಜೆಪಿ ಹೈಕಮಾಂಡ್ ಖಡಕ್ ಸೂಚನೆ ನೀಡಲಾಗಿತ್ತು. ಈ ಹಿನ್ನಲೆಯಲ್ಲಿ ನಿನ್ನೆ ಹೊರಡಿಸಿದ್ದಂತ ಆದೇಶವನ್ನು ಇಂದು ರದ್ದು ಮಾಡಲಾಗಿದೆ.
ಇದರಿಂದ ವಿಜಯನಗರಕ್ಕೆ ಶಶಿಕಲಾ ಜೊಲ್ಲೆ, ಕೊಪ್ಪಳಕ್ಕೆ ಆನಂದ್ ಸಿಂಗ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮುಂದುವರೆಸಿ, ಆದೇಶಿಸಲಾಗಿದೆ .

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!