ರಾಜ್ಯದಲ್ಲಿ ಉತ್ತಮ ಆಡಳಿತ, ಅಭಿವೃದ್ಧಿ ಮತ್ತು ಸಮೃದ್ಧಿಗಾಗಿ ಮತದಾನ ಮಾಡಿ: ಅಮಿತ್​ ಶಾ ಮನವಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ರಾಜ್ಯದಲ್ಲಿ ಉತ್ತಮ ಆಡಳಿತ, ಅಭಿವೃದ್ಧಿ ಮತ್ತು ಸಮೃದ್ಧಿಗಾಗಿ ಇಂದು ಮತದಾನ ಮಾಡಿ ಎಂದು ರಾಜ್ಯದ ಜನತೆಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಮನವಿ ಮಾಡಿದ್ದಾರೆ.

ಈ ಕುರಿತು ಅಮಿತ್‌ ಶಾ ತಮ್ಮ ಟ್ವಿಟ್ಟರ್‌ ಖಾತೆಯಲ್ಲಿ, “ಮತದಾನದ ದಿನದಂದು, ಕರ್ನಾಟಕದ ನಮ್ಮ ಸಹೋದರ ಮತ್ತು ಸಹೋದರಿಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ರಾಜ್ಯದಲ್ಲಿ ಉತ್ತಮ ಆಡಳಿತ, ಅಭಿವೃದ್ಧಿ ಮತ್ತು ಸಮೃದ್ಧಿಗಾಗಿ ಮತದಾನ ಮಾಡಿ ಕೇ ನಿಮ್ಮ ಒಂದು ಮತವು ರಾಜ್ಯವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವುದನ್ನು ಮುಂದುವರಿಸುವ ಜನಪರ ಮತ್ತು ಪ್ರಗತಿಪರ ಸರ್ಕಾರವನ್ನು ಖಚಿತಪಡಿಸುತ್ತದೆ” ಎಂದು ಕನ್ನಡದಲ್ಲಿ ಟ್ವೀಟ್‌ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!