ದಿಗಂತ ವರದಿ ಹುಬ್ಬಳ್ಳಿ:
ಧಾರವಾಡ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿ ಪರವಾಗಿ ಮತದಾನ ಮಾಡಿ ಚಿತ್ರವನ್ನು ಸೆರೆ ಹಿಡಿದು ಫೇಸ್ಬುಕ್ ಸ್ಟೇಟಸ್ ನಲ್ಲಿ ಇಟ್ಟುಕೊಂಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ಇಲ್ಲಿನ ತನ್ವೀರ್ ಟಿ.ಎಂ ಎಂಬ ಯುವಕ ಫೇಸ್ ಬುಕ್ ನಲ್ಲಿ ಸ್ಟೇಟಸ್ ಇಟ್ಟಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಇದು ಯಾವ ಮತಗಟ್ಟೆ ಎಂಬುದು ತಿಳಿದು ಬಂದಿಲ್ಲ. ಮತಗಟ್ಟೆಗಳಲ್ಲಿ ಮೊಬೈಲ್, ಕ್ಯಾಮೆರಾ ಸೇರಿದಂತೆ ಯಾವುದೇ ವಸ್ತುಗಳನ್ನು ತೆಗೆದುಕೊಂಡು ಹೋಗುವಂತಿಲ್ಲ. ಆದರೆ, ಈ ಯುವಕ ಗೋಪ್ಯ ಮತದಾನವನ್ನು ಬಹಿರಂಗಪಡಿಸಿದ್ದಾನೆ. ಇದಕ್ಕೆ ಮತಗಟ್ಟೆ ಅಧಿಕಾರಿಗಳ ನಿರ್ಲಕ್ಷ್ಯ ಕಾರಣ ಎಂಬ ಚರ್ಚೆ ನಡೆಯುತ್ತಿದೆ.