ಹೊಸದಿಗಂತ ವರದಿ, ಶಿವಮೊಗ್ಗ:
ಜೆಡಿಎಸ್ಗೆ ಮತ ಹಾಕಿದರೆ ಕಾಂಗ್ರೆಸ್ಗೆ ಮತ ಹಾಕಿದಂತೆ. ಕಾಂಗ್ರೆಸ್ಗೆ ಮತ ಹಾಕಿದರೆ ಪಿಎಫ್ಐಗೆ ಮತ ಹಾಕಿದಂತೆ. ಹಾಗಾಗಿ ಮತದಾರರು ಯೋಚಿಸಿ ಮತ ಚಲಾಯಿಸಿ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಕರೆ ನೀಡಿದರು.
ಪಟ್ಟಣದಲ್ಲಿ ಶುಕ್ರವಾರ ಬಿಜೆಪಿ ಕಾರ್ಯಾಲಯದ ಸಮೀಪ ಆಯೋಜಿಸಲಾಗಿದ್ದ ಸಮಾವೇಶದಲ್ಲಿ ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ ಪರ ಮತಯಾಚಿಸಿ ಮಾತನಾಡಿದರು.
ಎರಡೂ ಪಕ್ಷಗಳು ಸಮಾಜ ವಿದ್ರೋಹಿಗಳಿಗೆ ಬೆಂಬಲ ಕೊಡುತ್ತಾ ಬಂದಿವೆ. ಹಾಗಾಗಿ ಮತದಾರರು ಎಚ್ಚರ ವಹಿಸಬೇಕು. ಯಡಿಯೂರಪ್ಪ ಸರ್ಕಾರದ ಅವಧಿಯಲ್ಲಿ ಸಮಾಜ ವಿದ್ರೋಹದ ಕೆಲಸ ಮಾಡುತ್ತಿದ್ದ ಪಿಎಫ್ಐ ಮೇಲೆ ಸಾಕಷ್ಟು ಪ್ರಕರಣ ದಾಖಲಿಸಿದ್ದರು. ಸುಮಾರು 1700 ಮಂದಿಯನ್ನು ಬಂಧಿಸಲಾಗಿತ್ತು. ಸಿದ್ದರಾಮಯ್ಯ ಸರ್ಕಾರದ ಅವಧಿಯಲ್ಲಿ ಇವರುಗಳ ಮೇಲೆ ದಾಖಲಾಗಿದ್ದ ಪ್ರಕರಣಗಳನ್ನು ವಾಪಾಸ್ ಪಡೆದರು. ಜೊತೆಗೆ 1700 ಮಂದಿಯನ್ನು ಬಿಡುಗಡೆ ಮಾಡಿಸಿದರು. ಇಂತಹವರು ಅಧಿಕಾರಕ್ಕೆ ಬರಬೇಕಾ? ಸಮಾಜದಲ್ಲಿ ಶಾಂತಿ ನೆಲೆಸುವುದು ಬೇಡವಾ ಎಂದು ಪ್ರಶ್ನಿಸಿದರು.
ಸಂಸದ ರಾಘವೇಂದ್ರ, ಶಾಸಕ ಕುಮಾರ್ ಬಂಗಾರಪ್ಪ, ಪ್ರಮುಖರಾದ ಡಿ.ಎಸ್.ಅರುಣ್, ಮೇಘರಾಜ್, ತಲಕಾಲಕೊಪ್ಪ ಪ್ರಕಾಶ್ ಇದ್ದರು.