ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ರಾಜ್ಯದ ವಿಧಾನಸಭಾ ಚುನಾವಣೆಯಲ್ಲಿ (Karnataka Election 2023) 80 ವರ್ಷ ಮೀರಿದ ಹಿರಿಯ ನಾಗರಿಕರು ಮತ್ತು ವಿಕಲಚೇತನರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಚುನಾವಣಾ ಆಯೋಗವು ಒದಗಿಸಿರುವ ಕ್ರಮದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಈ ಅವಕಾಶ ಚುನಾವಣೆಯ ದುರ್ಬಳಕೆಗೆ ಹಾದಿಯಾಗಲಿದೆ . ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗಕ್ಕೂ ದೂರು ನೀಡುವುದಾಗಿ ಹೇಳಿದ್ದಾರೆ.
ಅಂಗವಿಕಲರು, ವೃದ್ದರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ನೀಡಿರುವುದು ಸರಿಯಲ್ಲ.. ಬಿಜೆಪಿ ಚುನಾವಣೆ ಆಯೋಗವನ್ನು ಬಳಸಿಕೊಂಡು ಚುನಾವಣೆ ದುರ್ಬಳಕೆಗೆ ಇದು ಸಹಕಾರಿಯಾಗಲಿದೆʼ ಎಂದು ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.
ರಾಜ್ಯದಲ್ಲಿ 12 ಲಕ್ಷಕ್ಕೂ ಹೆಚ್ಚು ವೃದ್ಧ ಹಾಗೂ ಅಂಗವಿಕಲರ ಮತದಾರರಿದ್ದಾರೆ. ಇವರು ಮನೆಯಲ್ಲೇ ಮತದಾನ ಮಾಡಿದರೆ ಅಕ್ರಮ ನಡೆಯುತ್ತದೆ. ತಮಗೆ ಬೇಕಾದಂತೆ ಬಿಜೆಪಿ ಅಧಿಕಾರ ದುರುಪಯೋಗ ಮಾಡಿಕೊಳ್ಳುತ್ತದೆ.ಈ ವಿಚಾರವಾಗಿ ಕೇಂದ್ರ ಚುನಾವಣಾ ಆಯೋಗಕ್ಕೆ ಆಕ್ಷೇಪ ಸಲ್ಲಿಸುವುದಾಗಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ.