ವೃಕ್ಷಮಾತೆ ತುಳಸಿ ಗೌಡ ಆರೋಗ್ಯದಲ್ಲಿ ಕೊಂಚ ಸುಧಾರಣೆ

ದಿಗಂತ ವರದಿ ಅಂಕೋಲಾ:

ಆರೋಗ್ಯದಲ್ಲಿ ಏರುಪೇರು ಉಂಟಾದ ಕಾರಣದಿಂದ ಕಾರವಾರದ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲ್ಪಟ್ಟ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ವೃಕ್ಷಮಾತೆ ಖ್ಯಾತಿಯ ತುಳಸಿ ಗೌಡ ಅವರು ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚೇತರಿಸಿಕೊಳ್ಳುತ್ತಿರುವುದಾಗಿ ತಿಳಿದು ಬಂದಿದೆ.

ಕಿಮ್ಸ್ ಕಾರವಾರದ ನಿರ್ದೇಶಕ ಡಾ.ಗಜಾನನ ನಾಯಕ ಅವರ ಮಾರ್ಗದರ್ಶನದಲ್ಲಿ ಆಸ್ಪತ್ರೆಯ ವೈದ್ಯರು ಮತ್ತು ಸಿಬ್ಬಂದಿಗಳು ತುಳಸಿ ಗೌಡ ಅವರ ಆರೋಗ್ಯದ ಕುರಿತಂತೆ ವಿಶೇಷ ಕಾಳಜಿಯೊಂದಿಗೆ ಚಿಕಿತ್ಸೆ ನೀಡುತ್ತಿದ್ದು ಅವರ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದೆ ಎಂದು ತುಳಸಜ್ಜಿ ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ.

ತುಳಸಿ ಗೌಡ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಮನೆಯಲ್ಲಿ ಕುಸಿದು ಬಿದ್ದ ಕಾರಣ ಮತ್ತು ಸ್ವಲ್ಪ ಉಸಿರಾಟದ ಸಮಸ್ಯೆ ಕಂಡು ಬಂದಿದ್ದರಿಂದ ಅವರನ್ನು ಕಾರವಾರ ಜಿಲ್ಲಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!