ಹೊಸದಿಗಂತ ಡಿಜಿಟಲ್ ಡೆಸ್ಕ್:
ಪ್ರತಿಷ್ಠಿತ ವಿಶ್ವ ಸಂವಾದ ಕೇಂದ್ರ ಮಾಧ್ಯಮ ಪ್ರಶಸ್ತಿ ಪುರಸ್ಕೃತರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಪುರಸ್ಕೃತರಿಗೆ ಜೂನ್ 25 ರಂದು ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ರಾಜ್ಯದ ಸುದ್ದಿ ಸಂವಹನ ಸಂಸ್ಥೆ ‘ವಿಶ್ವ ಸಂವಾದ ಕೇಂದ್ರ ಕರ್ನಾಟಕ’, ಇದರ ವತಿಯಿಂದ ನೀಡಲಾಗುವ ವಾರ್ಷಿಕ ವಿಎಸ್ಕೆ ಮಾಧ್ಯಮ ಪ್ರಶಸ್ತಿಯ 2023ನೇ ಸಾಲಿನ ಪುರಸ್ಕೃತರ ಹೆಸರನ್ನು ಪ್ರಕಟಿಸಲಾಗಿದ್ದು, ಪುರಸ್ಕೃತರಿಗೆ ಪ್ರಶಸ್ತಿ ಪ್ರದಾನ ಸಮಾರಂಭವು ಜೂನ್ 25,2023ರ ಭಾನುವಾರ ಬೆಳಗ್ಗೆ 10:30ಕ್ಕೆ ಬೆಂಗಳೂರಿನ ಬಸವನಗುಡಿಯ ಬಿ.ಎಂ.ಎಸ್. ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಮಾಧ್ಯಮ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ ಪತ್ರಕರ್ತರಿಗೆ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಮುಖ್ಯ ಅತಿಥಿಗಳಾಗಿ ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಕುಲಪತಿ ಡಾ. ನಿರಂಜನ ವಾನಳ್ಳಿ, ರಾಷ್ಟ್ರೀಯ ಸ್ವಯಂಸೇವಕ ಸಂಘದ ದಕ್ಷಿಣ-ಮಧ್ಯ ಕ್ಷೇತ್ರೀಯ ಕಾರ್ಯವಾಹ ನಾ. ತಿಪ್ಪೇಸ್ವಾಮಿ ಪ್ರಶಸ್ತಿ ಅವರು ಭಾಗವಹಿಸಲಿದ್ದಾರೆ.
ಪ್ರಶಸ್ತಿ ಪುರಸ್ಕೃತರ ಪಟ್ಟಿ ಹೀಗಿದೆ:
ತಿ.ತಾ. ಶರ್ಮ ಪತ್ರಿಕೋದ್ಯಮ ಪ್ರಶಸ್ತಿ:
ಶ್ರೀ ರವಿಪ್ರಕಾಶ್ ಎಸ್, ಪ್ರಜಾವಾಣಿ
ಶ್ರೀ ಜಯಪ್ರಕಾಶ್ ಶೆಟ್ಟಿ, ಸುವರ್ಣ ನ್ಯೂಸ್ ವಾರ್ತಾ ವಾಹಿನಿ
ಬೆ.ಸು.ನಾ. ಮಲ್ಯ ಪತ್ರಿಕೋದ್ಯಮ ಪ್ರಶಸ್ತಿ:
ಶ್ರೀ ಎಂ. ಶ್ರೀನಿವಾಸನ್, ಅಜೇಯ, ಶಿವಮೊಗ್ಗ
ಹೊ.ವೆ. ಶೇಷಾದ್ರಿ ಅಂಕಣಕಾರ ಪ್ರಶಸ್ತಿ:
ಶ್ರೀ ಹೆಬ್ರಿ ಬಾಲಕೃಷ್ಣ ಮಲ್ಯ, ಹೊಸದಿಗಂತ
ಶ್ರೀ ಕಾ. ರಮಾನಂದ ಆಚಾರ್ಯ, ವಿಕ್ರಮ ವಾರಪತ್ರಿಕೆ
ವಿ.ಎಸ್.ಕೆ. ಡಿಜಿಟಲ್ ಮಾಧ್ಯಮ ಪ್ರಶಸ್ತಿ:
ಶ್ರೀ ಎಂ. ಎಸ್. ರಾಘವೇಂದ್ರ, ಮೀಡಿಯಾ ಮಾಸ್ಟರ್ಸ್