ಹೊಸದಿಗಂತ ಡಿಜಿಟಲ್ ಡೆಸ್ಕ್:
ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ದಾಖಲಿಸಿದ ಆಮ್ ಆದ್ಮಿ ಪಕ್ಷ ಅದಿಕಾರದ ಚುಕ್ಕಾಣಿ ಹಿಡಿಯಲು ಸಕಲ ಸಿದ್ಧತೆ ನಡೆಸುತ್ತಿದ್ದು, ಇದರ ನಡುವೆ ನೂತನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಭಗವಂತ್ ಮಾನ್ ಅವರು ಮುಖ್ಯಮಂತ್ರಿ ಆಗುವುದಕ್ಕೂ ಮೊದಲೇ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.
ಪಂಜಾಬ್ನಲ್ಲಿ ಮಾಜಿ ಸಂಸದರು, ಮಾಜಿ ಸಚಿವರು, ಶಾಸಕರು ಸೇರಿದಂತೆ ವಿವಿಐಪಿಗಳಿಗೆ ನೀಡಿರುವ ಭದ್ರತೆಯನ್ನು ತಕ್ಷಣವೇ ಹಿಂಪಡೆದುಕೊಳ್ಳುವಂತೆ ಆದೇಶ ಹೊರಡಿಸಿದ್ದಾರೆ. ಈ ಪ್ರಕಾರ ಬಾದಲ್ ಕುಟುಂಬ ಹೊರತುಪಡಿಸಿ, ಉಳಿದವರಿಗೆ ನೀಡಿರುವ ಭದ್ರತೆ ಹಿಂಪಡೆದುಕೊಳ್ಳಲು ಸೂಚಿಸಿದ್ದಾರೆ.
ರಾಜ್ಯದಲ್ಲಿ ಎಎಪಿ ಸರ್ಕಾರ ಅಧಿಕಾರಕ್ಕೆ ಬಂದರೆ VIP ಸಂಸ್ಕೃತಿ ಸಂಪೂರ್ಣವಾಗಿ ತೆಗೆದು ಹಾಕಲಾಗುವುದು ಎಂದು ಭಗವಂತ್ ಚುನಾವಣಾ ಮುನ್ನ ಘೋಷಿಸಿದ್ದು, ಇದೀಗ ಕೊಟ್ಟ ಮಾತಿನಂತೆ ಇದೀಗ ನಿರ್ಧಾರ ಕೈಗೊಂಡಿದ್ದಾರೆ.
ಇದೇ ಮಾರ್ಚ್ 16ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಪಂಜಾಬ್ ಸಿಎಂ ಆಗಿ ಭಗವಂತ್ ಮಾನ್ ಪದಗ್ರಹಣ ಮಾಡಲಿದ್ದಾರೆ.