ಸಂಜೆ ಆರು ಗಂಟೆವರೆಗೆ ಕಾಯ್ತೀನಿ, ನಂತರ ಅಂತಿಮ ತೀರ್ಮಾನ : ಶೆಟ್ಟರ್

ಹೊಸದಿಗಂತ ವರದಿ ಹುಬ್ಬಳ್ಳಿ:

ನನಗೆ ಟಿಕೆಟ್ ನೀಡುವ ವಿಚಾರಕ್ಕೆ‌ ಸಂಬಂಧಿಸಿ ಸಂಜೆ ಆರು ಗಂಟೆವರೆಗೆ ಕಾಯುವೇ ಬಳಿಕ ಅಂತಿಮ‌ ತೀರ್ಮಾನ ಕೈಗೊಳ್ಳುವೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದರು.
ಬೆಂಬಲಿಗರ ಸಭೆ ಬಳಿಕ ಮಾತನಾಡಿದ ಅವರು, ಪಕ್ಷ ಯಾವುದೇ ಜವಾಬ್ದಾರಿ ಕೊಟ್ಟರೂ ನಿಭಾಯಿಸುತ್ತೇನೆ. ಒಬ್ಬ ಶಾಸಕನಾಗಿ ಕೆಲಸ ಮಾಡಲು ಇನ್ನೂ ಅವಕಾಶವಿದೆ. ಶೆಟ್ಟರ್‌ಗೆ ಟಿಕೆಟ್ ಇಲ್ಲಾ ಅನ್ನೋ ವಾತಾವರಣ ಯಾಕೆ ಬಂತು ಗೊತ್ತಿಲ್ಲ ಎಂದರು.

ಯಾವುದೇ ಕಳಂಕ ನನ್ನ ಮೇಲೆ ಇಲ್ಲಾ. ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷ ಸಂಘಟಿಸಿ, ಶಕ್ತಿ‌ ಕೊಡುವ ಕೆಲಸ ಮಾಡಿದ್ದೇನೆ. ಪಕ್ಷ ನನಗೆ ಕೊಟ್ಟಿರುವ ಅವಕಾಶಕ್ಕೆ ಧನ್ಯವಾದ ಹೇಳುತ್ತೇನೆ. ಅಪೂರ್ಣ ಕೆಲಸ ಪರಿಪೂರ್ಣ ಮಾಡಲು ಮತ್ತೊಂದು ಅವಕಾಶ ಕೊಡಬೇಕು ಎಂದು ಹೇಳಿದರು.

ಮುಖ್ಯಮಂತ್ರಿ‌ ಬಸವರಾಜ ಬೊಮ್ಮಾಯಿ ನನ್ನ ಜೊತೆ ಹಲವು ವಿಚಾರಗಳ ಚರ್ಚೆ ಮಾಡಿದ್ದಾರೆ. ಕಳೆದ ಮೂರು ತಿಂಗಳಿಂದ ನನ್ನ ರಾಜಕೀಯ ಜೀವನದ ಕೆಟ್ಟ ದಿನಗಳು ಬಂದಿವೆ. ಕೆಟ್ಟ ದಿನ ಹೊರ ಹೋಗಿ ಒಳ್ಳೆ ದಿನಗಳು ಬರುತ್ತೆ ಅನ್ನೋ ನಿರೀಕ್ಷೆಯಿದೆ ಎಂದು ತಿಳಿಸಿದರು.

ಜೋಶಿಯವರು ಕೇಂದ್ರ ನಾಯಕರ ಪ್ರತಿನಿಧಿಯಾಗಿ ಬಂದಿದ್ದರು. ಅವರ ಬಳಿ ನಮ್ಮ ವಿಚಾರಗಳನ್ನು ತಿಳಿಸಿದ್ದೇವೆ, ಸಂಜೆಯವರೆಗೆ ಕಾಯಲು ಹೇಳಿದ್ದಾರೆ. ನಾನು ಈ ಬಾರಿ ರಾಜಕೀಯ ಚುನಾವಣಾ ಕಣದಲ್ಲಿ ಇರುತ್ತೇನೆ‌‌ ಎಂದರು.‌

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!