ಹೊಸದಿಗಂತ ವರದಿ ಕೊಪ್ಪಳ:
ಮಳೆಗೆ ಮನೆಯ ಗೋಡೆ ಕುಸಿದಿದ್ದು, ಸ್ಥಳದಲ್ಲಿಯೇ ವೃದ್ದೆ ಮೃತಪಟ್ಟಿದ್ದು, ಇಬ್ಬರಿಗೆ ಗಂಭೀರ ಗಾಯಗಳಾದ ಘಟನೆ ಕೊಪ್ಪಳ ತಾಲೂಕಿನ ಮತ್ತೂರಿನಲ್ಲಿ ನಡೆದಿದೆ. ಬಸಮ್ಮ(65) ಮೃತ ವೃದ್ದೆ ಆಕೆಯ ಗಂಡ ಶಿವನಗೌಡ ಹಾಗು ಶಂಕ್ರಮ್ಮನಿಗೆ ಗಂಭೀರ ಗಾಯಗಳಾಗಿವೆ.
ಗಾಯಾಳುಗಳನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಇತ್ತೀಚಿಗೆ ಬಿದ್ದ ಮಳೆಗೆ ಮನೆಯ ಗೋಡೆ ನೆನದಿತ್ತು. ಇಂದು ಮದ್ಯಾಹ್ನ ವೇಳೆ ಏಕಾಎಕಿ ಗೋಡೆ ಕುಸಿದಿದೆ. ಮಣ್ಣಿನಡಿ ವೃದ್ಧೆಯ ದೇಹ ಸಿಲುಕಿಕೊಂಡಿದ್ದು, ಪೊಲೀಸರು ಮೃತದೇಹವನ್ನು ಹೊರ ತೆಗೆದಿದ್ದಾರೆ. ಈ ಸಂಬಂಧ ಅಳವಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.