ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರೀ ಮಳೆಯಿಂದಾಗಿ ನಿರ್ಮಾಣ ಹಂತದ ಕಟ್ಟಡದ ಗೋಡೆ ಕುಸಿದು ದುರಂತ ಸಂಭವಿಸಿದೆ. ಇಂದು ಬೆಳಗ್ಗೆ ನಾಲ್ಕು ವರ್ಷದ ಮಗು ಸೇರಿ ಒಟ್ಟು 7 ಮಂದಿ ಸಾವನ್ನಪ್ಪಿದ್ದಾರೆ. ತೆಲಂಗಾಣದ ಬಚುಪಳ್ಳಿಯಲ್ಲಿ ಮಳೆಯಿಂದಾಗಿ ದುರಂತ ಸಂಭವಿಸಿದೆ.
ಮೃತರು ಒಡಿಶಾ ಹಾಗೂ ಛತ್ತೀಸ್ಗಢ ಮೂಲದ ವಲಸೆ ಕಾರ್ಮಿಕರು. ಬಿಲ್ಡಿಂಗ್ ನಿರ್ಮಾಣ ಸಂಬಂಧ ತೆಲಂಗಾಣಕ್ಕೆ ಬಂದಿದ್ದರು. ಮೃತರ ದೇಹಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ತೆಲಂಗಾಣ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದೆ. ಪರಿಣಾಮ ಜನ ಜೀವನ ಅಸ್ತವ್ಯಸ್ತಗೊಂಡಿದೆ.