ಹೊಸದಿಗಂತ ಡಿಜಿಟಲ್ ಡೆಸ್ಕ್:
ಡಿ.ಕೆ.ಸುರೇಶ್ 12 ವರ್ಷಗಳ ಕಾಲ ಸಂಸದರಾಗಿದ್ದರು. ನಾಮಪತ್ರ ಸಲ್ಲಿಸುವ ವೇಳೆಗೆ ಅವರ ಆದಾಯ 600 ಕೋಟಿ ರೂ. ಆಗಿದೆ. ಏನೂ ಇಲ್ಲದ ವ್ಯಕ್ತಿ 600 ಕೋಟಿ ರೂ. ಹೇಗೆ ಬಂತು. ಭ್ರಷ್ಟ ಸಂಸದ ಬೇಕಾ? ಸಾದಸೀದಾ ವ್ಯಕ್ತಿ ಮಂಜುನಾಥ್ ಬೇಕಾ? ಇದನ್ನು ವಿಧಾನ ಪರಿಷತ್ ಸದಸ್ಯ ಸಿ.ಪಿ.ಯೋಗೇಶ್ವರ್ ಪ್ರಶ್ನಿಸಿದ್ದಾರೆ.
ಕೋಡಂಬಳ್ಳಿ ಗ್ರಾಮದ ಬಳಿ ಹಮ್ಮಿಕೊಂಡಿದ್ದ ಜೆಡಿಎಸ್-ಬಿಜೆಪಿ ಕಾರ್ಯಕರ್ತರ ಜಂಟಿ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ನಿರ್ಮಲಾ ಸೀತಾರಾಮನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸಂಪುಟದಲ್ಲಿ ಹಣಕಾಸು ಸಚಿವರಾಗಿದ್ದಾರೆ. ಅವರು ಚುನಾವಣೆಗೆ ಸ್ಪರ್ಧಿಸಬೇಕು ಅಂದ್ರೆ ದುಡ್ಡಿಲ್ಲ ಅಂದ್ರು ಅಂದರೆ ಅವರು ಪ್ರಾಮಾಣಿಕವಾಗಿ ಭ್ರಷ್ಟಾಚಾರ ಮಾಡದೆ ಕೆಲಸ ಮಾಡಿದ್ದಾರೆ.
ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ. ಇಲ್ಲಿ ಕುಡಿಯಲು ನೀರಿಲ್ಲ, ವಿದ್ಯುತ್ ಇಲ್ಲದೇ ಜನ ಪರದಾಡುತ್ತಿದ್ದಾರೆ. ಚನ್ನಪಟ್ಟಣದಲ್ಲಿ ಸೀರೆ, ಕುಕ್ಕರ್ ಹಂಚುತ್ತಿದ್ದಾರೆ. ಆದರೆ, ಮಂಜುನಾಥ್ ಪರವಾಗಿ ಜನರೇ ಎದ್ದು ನಿಂತಿದ್ದಾರೆ, ಈ ಬಾರಿ ನೀವೆಲ್ಲ ಒಬ್ಬ ನಿಷ್ಠಾವಂತ, ಪ್ರಾಮಾಣಿಕ ವ್ಯಕ್ತಿ ಮಂಜುನಾಥ್ ಅವರಿಗೆ ಬೇಬಲಿಸಬೇಕು ಎಂದು ಮನವಿ ಮಾಡ್ಕೊಂಡಿದ್ದಾರೆ.