ಈ ಮೂರು ಕ್ಷೇತ್ರಗಳ ಟಿಕೆಟ್ ಬೇಕು: ನಿಖಿಲ್ ಕುಮಾರಸ್ವಾಮಿ ಡಿಮ್ಯಾಂಡ್!

ಹೊಸದಿಗಂತ ಡಿಜಿಟಲ್ ಡೆಸ್ಕ್:

ನಮಗೆ ಏಳೆಂಟು ಟಿಕೆಟ್ ಬೇಡ, ಬೇಕಿರೋದು ಮೂರು ಮಾತ್ರ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಕಾರ್ಯಕರ್ತರ ಸಭೆ ನಡೆಸಿದ್ದಾರೆ.

ಹೆಚ್ಚಿನ ಸ್ಥಾನ ಗೆದ್ದು ಮತ್ತೊಮ್ಮೆ ಪ್ರಧಾನಿ ಮೋದಿ ಅವರನ್ನು ಗೆಲ್ಲಿಸುವ ಉದ್ದೇಶ ನಮ್ಮದು. ಹಾಗಾಗಿ ೨೮ ಕ್ಷೇತ್ರಗಳಲ್ಲಿಯೂ ಮೈತ್ರಿ ಅಭ್ಯರ್ಥಿ ಗೆಲ್ಲಬೇಕು.

ನಮಗೆ ಏಳೆಂಟು ಸ್ಥಾನಗಳ ಟಿಕೆಟ್ ಬೇಕಿಲ್ಲ, ಮೂರು ಕ್ಷೇತ್ರಗಳ ಟಿಕೆಟ್ ಕೇಳಿದ್ದೇವೆ. ಕೋಲಾರ, ಮಂಡ್ಯ ಹಾಗೂ ಹಾಸನ ಕ್ಷೇತ್ರಗಳಲ್ಲಿ ಮಾತ್ರ ನಾವು ಟಿಕೆಟ್ ಕೇಳ್ತಿದ್ದೇವೆ ಎಂದು ಸ್ಪಷ್ಟವಾಗಿ ತಮ್ಮ ಡಿಮ್ಯಾಂಡ್ ಏನೆಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!