ವಕ್ಫ್ ತಿದ್ದು‍ಪಡಿ ನಿಯಮ ಪುನರ್ ಪರಿಶೀಲನೆ ಆಗಬೇಕು: ಮಾಯಾವತಿ

ಹೊಸದಿಗಂತ ಡಿಜಿಟಲ್ ಡೆಸ್ಕ್:

ವಕ್ಫ್ ತಿದ್ದು‍ಪಡಿ ಕಾಯ್ದೆಯ ಕೆಲವು ನಿಯಮಗಳನ್ನು ಪುನರ್ ಪರಿಶೀಲನೆ ನಡೆಸಬೇಕು ಎಂದು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಹೇಳಿದ್ದಾರೆ.

ವಕ್ಫ್ ಬೋರ್ಡ್‌ನಲ್ಲಿ ಮುಸ್ಲಿಮರಲ್ಲದವರು ಇರುವುದಕ್ಕೆ ಕಾನೂನಿನಲ್ಲಿ ಅವಕಾಶ ನೀಡಿರುವುದು ಮೇಲ್ನೋಟಕ್ಕೆ ಸರಿ ಕಾಣುವುದಿಲ್ಲ. ಜೊತೆಗೆ ಕಾನೂನನ್ನು ತಾತ್ಕಾಲಿಕವಾಗಿ ಅಮಾನತ್ತಿನಲ್ಲಿಡಬೇಕು ಎಂದು ಹೇಳಿದ್ದಾರೆ.

ಉಭಯ ಮನೆಗಳಲ್ಲಿ ಭಾರೀ ಚರ್ಚೆಯ ಬಳಿಕ ವಿವಾದಾತ್ಮಕ ವಕ್ಫ್ ಮಸೂದೆಗೆ ಒಪ್ಪಿಗೆ ಲಭಿಸಿತ್ತು. ಲೋಕಸಭೆಯಲ್ಲಿ 288 ಸದಸ್ಯರು ವಕ್ಫ್ ಮಸೂದೆ ಬೆಂಬಲಿಸಿದರೆ, 232 ಸದಸ್ಯರು ವಿರುದ್ಧವಾಗಿ ಮತ ಚಲಾಯಿಸಿದರು. ರಾಜ್ಯಸಭೆಯಲ್ಲಿ 128 ಸದಸ್ಯರು ಪರವಾಗಿ ಮತ್ತು 95 ಸದಸ್ಯರು ವಿರೋಧಿಸಿ ಮತ ಚಲಾಯಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here