ವಕ್ಫ್‌ ತಿದ್ದುಪಡಿ: ಪಶ್ಚಿಮ ಬಂಗಾಳದಲ್ಲಿ ಭುಗಿಲೆದ್ದ ಹಿಂಸಾಚಾರ, ಜೀವತೆತ್ತ ತಂದೆ ಮಗ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಪಶ್ಚಿಮ ಬಂಗಾಳದ ಮುಷಿರಾಬಾದ್‌ ಜಿಲ್ಲೆಯಲ್ಲಿ ವಕ್ಫ್‌ ತಿದ್ದುಪಡಿ ಕಾನೂನು ವಿರೋಧಿಸಿ ನಡೆದ ಪ್ರತಿಭಟನೆ ಹಿಂಸಾಚಾರ ಸ್ವರೂಪ ಪಡೆದಿದೆ.

ಈ ಘಟನೆ ಜಿಲ್ಲೆಯ ಜಫ್ರಾಬಾದ್‌ನ ಶಂಷೇರ್‌ಗಂಜ್‌ ಪ್ರದೇಶದಲ್ಲಿ ನಡೆದಿದ್ದು, ಹಿಂಸಾಚಾರದಲ್ಲಿ ತಂದೆ ಹಾಗೂ ಮಗನನ್ನು ಇರಿದು ಕೊಲ್ಲಲಾಗಿದೆ. ಇಲ್ಲಿಯವರೆಗೆ 110 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದ್ದು, ಅನೇಕ ಸ್ಥಳಗಳಲ್ಲಿ ಪೊಲೀಸ್ ದಾಳಿ ಮುಂದುವರೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತೊಂದು ಪ್ರತ್ಯೇಕ ಘಟನೆಯಲ್ಲಿ, ಇದೇ ಊರಿನ ಧುಲಿಯನ್‌ ಎಂಬಲ್ಲಿ ವ್ಯಕ್ತಿಯ ಮೇಲೆ ಗುಂಡಿನ ದಾಳಿ ನಡೆದಿದೆ ಎಂದು ವರದಿಯಾಗಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!