ಹೊಸದಿಗಂತ ಡಿಜಿಟಲ್ ಡೆಸ್ಕ್:
ಬ್ಯಾಕ್ ಔಟ್ ನಿಂದಾಗಿ ಇಂಡಿಯನ್ IPL ಟೂರ್ನಿ ಇದೀಗ ಸಂಕಷ್ಟದಲ್ಲಿದೆ. ಗುರುವಾರ ಧರ್ಮಶಾಲಾದಲ್ಲಿ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವನ್ನು ರದ್ದುಗೊಳಿಸಲಾಯಿತು. ಪಠಾಣ್ಕೋಟ್ನಲ್ಲಿ ಗಡಿಯಾಚೆಯಿಂದ ವಾಯುದಾಳಿಗಳು ನಡೆದ ಪರಿಣಾಮ ಪಂದ್ಯವನ್ನು ರದ್ದುಗೊಳಿಸಲಾಯಿತು.
ಇದರ ನಂತರ, ಐಪಿಎಲ್ 2025 ಪಂದ್ಯಾವಳಿಯ ಭವಿಷ್ಯವನ್ನು ಪರಿಗಣಿಸಲು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಸಭೆ ನಡೆಸಿತು. ಬಿಸಿಸಿಐ ಕೂಡ ಪಂದ್ಯಾವಳಿಯನ್ನು ನಿಲ್ಲಿಸುವ ಅಥವಾ ವೇಳಾಪಟ್ಟಿಯನ್ನು ಬದಲಾಯಿಸುವ ಬಗ್ಗೆ ಯೋಚಿಸುತ್ತಿದೆ ಎನ್ನಲಾಗಿದೆ.
“ನಾವು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದೇವೆ, ಸರ್ಕಾರದೊಂದಿಗೆ ಸಮಾಲೋಚಿಸುತ್ತಿದ್ದೇವೆ ಮತ್ತು ನಾಳೆ (ಇಂದು) ಐಪಿಎಲ್ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತೇವೆ” ಎಂದು ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ತಿಳಿಸಿದ್ದಾರೆ.
ಪರಿಸ್ಥಿತಿ ದಿನೇ ದಿನೇ ಬದಲಾಗುತ್ತಿದೆ. ನಮಗೆ ಏನು ಹೇಳುತ್ತಾರೋ ಅದನ್ನು ನಾವು ಮಾಡುತ್ತೇವೆ ಮತ್ತು ಎಲ್ಲಾ ಫ್ರಾಂಚೈಸಿಗೆ ತಿಳಿಸುತ್ತೇವೆ. ಈ ಸಮಯದಲ್ಲಿ ನಮ್ಮ ಆದ್ಯತೆ ಎಲ್ಲಾ ಆಟಗಾರರು, ಅಭಿಮಾನಿಗಳು ಮತ್ತು ಫ್ರಾಂಚೈಸಿಯ ಸುರಕ್ಷತೆಯಾಗಿದೆ ಎಂದು ಹೇಳಿದ್ದಾರೆ.