ಹೊಸದಿಗಂತ ಡಿಜಿಟಲ್ ಡೆಸ್ಕ್:
ಶಿವಮೊಗ್ಗ ಜಿಲ್ಲೆಯ ಪ್ರಸಿದ್ಧ ಸಕ್ರೆಬೈಲ್ ಆನೆ ಬಿಡಾರದಲ್ಲಿ ಆನೆ ವಾಚ್ಮನ್ ಮೇಲೆ ದಾಳಿ ನಡೆಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಆಲೆ ಹೆಸರಿನ ಆನೆಯನ್ನು ಬಿಡಾರದಿಂದ ಕಾಡಿಗೆ ಕರೆದುಕೊಂಡು ಹೋಗುತ್ತಿದ್ದ ವೇಳೆ ವಾಚ್ಮನ್ ಚೌಡಪ್ಪ ಮೇಲೆ ಆನೆ ದಾಳಿ ಮಾಡಿದೆ. ಬಾಳೆಹಣ್ಣು ತಿನ್ನಿಸಲು ಯತ್ನಿಸುತ್ತಿರುವಾಗ ದಾಳಿ ಮಾಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.