ಜಲಮಂಡಳಿಯ ಕಾಮಗಾರಿ ಗುಂಡಿಗೆ ಬಿದ್ದು ಯುವಕ ಮೃತ್ಯು: BWSSB ವಿರುದ್ಧ FIR ದಾಖಲು

ಹೊಸದಿಗಂತ ಡಿಜಿಟಲ್ ಡೆಸ್ಕ್:

ಜಲಮಂಡಳಿಯ ಕಾಮಗಾರಿ ಗುಂಡಿಗೆ ಬಿದ್ದು ಯುವಕ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಗೇರಿ ಸಂಚಾರ ಪೊಲೀಸ್ ಇಲಾಖೆ ಬಿಡಬ್ಲ್ಯುಎಸ್‌ಎಸ್‌ಬಿ ಮತ್ತು ಗುತ್ತಿಗೆದಾರನ ವಿರುದ್ಧ FIR ದಾಖಲಿಸಿದೆ.

ಪ್ರಕರಣ ಸಂಬಂಧ ಪಶ್ಚಿಮ ವಿಭಾಗ ಸಂಚಾರ ಡಿಸಿಪಿ ಅನಿತಾ. ಬಿ. ಹದ್ದಣ್ಣವರ್ ಮಾತನಾಡಿ. ಭಾನುವಾರ ಸಂಜೆ (ಏ.14) ಮೂವರು ಯುವಕರು ಅತಿವೇಗದಲ್ಲಿ ವಾಹನ ಚಲಾಯಿಸಿ ಗುಂಡಿಗೆ ಬಿದ್ದಿದ್ದಾರೆ ಎಂದು ವರದಿ ಮಾಡಿದ್ದಾರೆ. ಈ ಮೂವರಲ್ಲಿ ಸದ್ದಾಂ ಪಾಷಾ ಎಂಬ ಯುವಕ ಮೃತಪಟ್ಟಿದ್ದಾನೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದಲ್ಲಿ ಗಾಯಗೊಂಡಿರುವ ಉಮ್ರಾನ್ ಪಾಷಾ ದೂರು ದಾಖಲಿಸಿದ್ದಾರೆ. ಗುತ್ತಿಗೆದಾರ ಹಾಗೂ ಇಂಜಿನಿಯರ್ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!