ಹೊಸದಿಗಂತ ವರದಿ,ಕಲಬುರಗಿ
ಮಹಾರಾಷ್ಟ್ರದ ವೀರ್ ಮತ್ತು ಉಜನಿ ಜಲಾಶಯದಿಂದ ಭೀಮಾ ನದಿಗೆ 70000 ಕ್ಕೂ ಹೆಚ್ಚು ಕ್ಯೂಸೆಕ್ ನೀರು ಭೀಮಾ ನದಿ ಶನಿವಾರ ಹರಿಬಿಟ್ಟಿದ್ದು, ಯಾವುದೇ ಸಮಯದಲ್ಲಿ ಜಿಲ್ಲೆಯ ನದಿಗೆ ಬರುವ ಸಾಧ್ಯತೆವಿದೆ. ಹೀಗಾಗಿ ಭೀಮಾ ನದಿ ದಂಡೆ ಮತ್ತು ಸನ್ನತ್ತಿ ಬ್ರಿಡ್ಜ್ ಕಂ ಬ್ಯಾರೇಜ್ ಕಡೆ ಸಾರ್ವಜನಿಕರು ಹೋಗದಂತೆ ಹಾಗೂ ಜಾನುವಾರುಗಳನ್ನು ಬಿಡದಂತೆ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಅವರು ಮನವಿ ಮಾಡಿದ್ದಾರೆ.
ಜಲಾಶಯದಿಂದ ಈ ಪ್ರಮಾಣದ ನೀರು ಬಿಡುಗಡೆಯಿಂದ ಸದ್ಯಕ್ಕೆ ಭೀಮಾ ನದಿ ದಂಡೆಯ ಗ್ರಾಮಗಳಲ್ಲಿ ಯಾವುದೇ ಪ್ರವಾಹ ಉಂಟಾಗುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ನಡಿ ದಂಡೆಗೆ ಹೋಗದಂತೆ ಮನವಿ ಮಾಡಿದೆ.
ಪ್ರವಾಹದಿಂದ ನದಿ ದಂಡೆಯ ಗ್ರಾಮಸ್ಥರಿಗೆ ಏನಾದರೂ ಸಮಸ್ಯೆ ಕಂಡು ಬಂದಲ್ಲಿ ತುರ್ತಾಗಿ ಸಹಾಯವಾಣಿ ಸಂಖ್ಯೆ 1077 ಹಾಗೂ ದೂ.ಸಂ. 08472-278677ಗೆ ಸಂಪರ್ಕಿಸಬೇಕೆಂದು ಅವರು ತಿಳಿಸಿದ್ದಾರೆ.