ಹೊಸದಿಗಂತ ವರದಿ, ಕೊಪ್ಪಳ:
ತುಂಗಭದ್ರಾ ಜಲಾಶಯ ಭಾಗಶಃ ಭರ್ತಿಯಾಗಿದ್ದು, ತುಂಗಾಭದ್ರ ಎಡದಂಡೆಯ ಕಾಲುವೆಗೆ ಭಾನುವಾರ ನೀರು ಹರಿಸಲು ಶಾಸಕ ಕೆ.ರಾಘವೇಂದ್ರ ಹಿಟ್ನಾಳ್ ಗಂಗಾ ಮಾತೆಯ ಪೂಜೆಯನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ತುಂಗಭದ್ರಾ ಜಲಾಶಯ ಭಾಗಶಃ ಭರ್ತಿಯಾಗಿದೆ. ಎಡದಂಡೆಯ ಕಾಲುವೆಗೆ ನೀರು ಬಿಡಲಾಗಿದೆ. ರೈತರು ಕೃಷಿ ಚಟುವಟಿಕೆ ಆರಂಭಿಸಿದ್ದು, ಸರಿಯಾದ ಸಮಯಕ್ಕೆ ರಸಗೊಬ್ಬರು ಹಾಗೂ ಬೀಜ ಸರಬರಾಜು ಮಾಡಲಾಗಿದೆ ಎಂದರು.
ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ