ಹೊಸದಿಗಂತ ವರದಿ ಕೊಪ್ಪಳ:
ಹಿರೇಹಳ್ಳ ಜಲಾಶಯದಿಂದ ಅಪಾರ ಪ್ರಮಾಣದ ನೀರು ಹಳ್ಳಕ್ಕೆ ಬಿಟ್ಟಿದ್ದು, ಕೋಳೂರು ಬಳಿ ಹಳ್ಳದಲ್ಲಿ ರೈತರು ಸಿಲುಕಿಕೊಂಡಿದ್ದಾರೆ.
ಮಹಾಂತೇಶ ಡೊಳ್ಳಿನ, ರಮೇಶ ಡೊಳ್ಳಿನ, ಬಸವರಾಜ ಗೊಂದಿಹೊಸಳ್ಳಿ, ಬಸವರಾಜ ಹುಯಿಲಗೋಳ, ಕೆಂಚಪ್ಪ ಕುರಬರ ಎಂಬುವವರು ಹಳ್ಳದಲ್ಲಿ ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ಅಗ್ನಿ ಶಾಮಕ ದಳ ಆಗಮಿಸಿದ್ದು ರೈತರ ರಕ್ಷಣಾ ಕಾರ್ಯಾಚರಣೆ ಆರಂಭಿಸಿದ್ದಾರೆ.