ನೀರಿನ ಸಂಗ್ರಹಣಾ ಮಟ್ಟ ಆತಂಕಕಾರಿ ಮಟ್ಟದಲ್ಲಿ ಕುಸಿತ: ಎಚ್ಚರಿಕೆ ಕರೆಗಂಟೆ ಬಾರಿಸಿದೆ ಬುಲೆಟಿನ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಳೆದ ವರ್ಷದ ಇದೇ ಅವಧಿಗೆ ಹೋಲಿಸಿದರೆ ಕರ್ನಾಟಕ ರಾಜ್ಯದಲ್ಲಿ ನೀರಿನ ಸಂಗ್ರಹಣಾ ಮಟ್ಟ ಆತಂಕಕಾರಿ ಮಟ್ಟದಲ್ಲಿ ಕುಸಿದಿದೆ ಎಂಬ ಆಘಾತಕಾರಿ ಮಾಹಿತಿ ಹೊರಬಿದ್ದಿದೆ.

ಕೇಂದ್ರೀಯ ಜಲ ಆಯೋಗವು ಬಿಡುಗಡೆ ಮಾಡುವ ವಾರದ ಬುಲೆಟಿನ್‌ನಲ್ಲಿ ಈ ಅಂಶ ಪ್ರಸ್ತಾಪವಾಗಿದ್ದು, ಹಿಮಾಚಲ ಪ್ರದೇಶ, ಪಂಜಾಬ್, ಮಧ್ಯಪ್ರದೇಶ, ತ್ರಿಪುರಾ, ರಾಜಸ್ಥಾನ, ಬಿಹಾರ, ಮಹಾರಾಷ್ಟ್ರ, ಉತ್ತರ ಪ್ರದೇಶ, ಗುಜರಾತ್, ಛತ್ತೀಸಗಢ, ಆಂಧ್ರಪ್ರದೇಶ, ತೆಲಂಗಾಣ ಮತ್ತು ತಮಿಳುನಾಡು ಸಹಿತ ಹಲವು ರಾಜ್ಯಗಳಲ್ಲಿಯೂ ಇದೇ ಸ್ಥಿತಿ ಇದೆ ಎಂದು ಆಯೋಗ ತಿಳಿಸಿದೆ.

ದೇಶದಲ್ಲಿರುವ 150 ಪ್ರಮುಖ ಜಲಾಶಯಗಳಲ್ಲಿ ಅವುಗಳ ಗರಿಷ್ಠ ಸಂಗ್ರಹ ಸಾಮರ್ಥ್ಯದ 38%ರಷ್ಟು ನೀರು ಮಾತ್ರ ಸದ್ಯ ಲಭ್ಯವಿದೆ ಎಂದೂ ಬುಲೆಟಿನ್ ಅಂಕಿ ಅಂಶಗಳು ಹೇಳಿವೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!