ಮಾ. 7ರೊಳಗೆ ನೋಂದಣಿ ಮಾಡಿಸದಿದ್ದರೆ ನೀರಿನ ಟ್ಯಾಂಕರ್‌ ಸೀಜ್: ಡಿಕೆಶಿ ಎಚ್ಚರಿಕೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬೆಂಗಳೂರು ನಗರದ ಎಲ್ಲಾ ನೀರಿನ ಟ್ಯಾಂಕರ್ ಮಾಲೀಕರು ಮಾ. 7ರೊಳಗೆ ನೋಂದಾಯಿಸದಿದ್ದರೆ ನೀರಿನ ಟ್ಯಾಂಕರ್ ಗಳನ್ನು ಸೀಜ್ ಮಾಡಲಾಗುವುದು ಎಂದು ಡಿಕೆಶಿ ಎಚ್ಚರಿಕೆ ನೀಡಿದ್ದಾರೆ. ಪ್ರಸ್ತುತ, ಟ್ಯಾಂಕರ್‌ಗಳು ನೀರು ಪೂರೈಕೆಗಾಗಿ 500 ರಿಂದ 2,000 ವರೆಗೆ ಶುಲ್ಕ ವಸೂಲಿ ಮಾಡುತ್ತಿದ್ದಾರೆ. ಹೀಗಾಗಿ ನೀರಿನ ದರವನ್ನು ಸರ್ಕಾರವೇ ನಿರ್ಧರಿಸಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಕುಡಿಯುವ ನೀರಿನ ಕುರಿತು ಬಿಬಿಎಂಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ 3,500 ಟ್ಯಾಂಕರ್‌ಗಳಿದ್ದು, 219 ಅಥವಾ ಕೇವಲ 10 ಪ್ರತಿಶತದಷ್ಟು ಮಾತ್ರ ನೋಂದಣಿಯಾಗಿದೆ. ಸಣ್ಣ ಮತ್ತು ದೊಡ್ಡ ಹಾಲಿನ ಟ್ಯಾಂಕರ್‌ಗಳು ಶೀಘ್ರದಲ್ಲಿಯೇ ಸರ್ಕಾರದ ವಶಕ್ಕೆ ಪಡೆಯಲಾಗುವುದು. ಪ್ರಸ್ತುತ 210 ಟ್ಯಾಂಕರ್‌ಗಳು ನೀರು ಪೂರೈಸಲು ಬಳಕೆಯಲ್ಲಿವೆ ಎಂದು ಬಿಡಬ್ಲ್ಯು ಎಸ್‌ಎಸ್‌ಬಿ ತಿಳಿಸಿದೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!