ಹೊಸದಿಗಂತ ವರದಿ,ಮಡಿಕೇರಿ:
ಗ್ರಾಮ ಪಂಚಾಯತಿಯಲ್ಲಿ ವಾಟರ್ ಮ್ಯಾನ್ ಕೆಲಸ ನಿರ್ವಹಿಸುತ್ತಿದ್ದ ಯುವಕನೊಬ್ಬ
ನೀರಿನ ಟ್ಯಾಂಕ್ ಒಳಗಡೆ ಬಿದ್ದು ಮೃತಪಟ್ಟ ಘಟನೆ ಮಡಿಕೇರಿ ತಾಲೂಕಿನ ಚೆಂಬು ಗ್ರಾಮದಲ್ಲಿ ನಡೆದಿದೆ.
ಯು.ಚೆಂಬು ಗ್ರಾಮದ ಮಾರ್ಪಡ್ಕ ನಿವಾಸಿ ಬೊಳುಗಲ್ಲು ಆನಂದ ಅವರ ಪುತ್ರ ನಿತಿನ್ (26) ಮೃತಪಟ್ಟ ದುರ್ದೈವಿ.
ಪಂಚಾಯತ್ ಟ್ಯಾಂಕ್’ನಿಂದ ನೀರು ಬಿಡಲು ತೆರಳಿದ್ದ ಈತ ಬಾರದೇ ಇದ್ದುದರಿಂದ ಅನುಮಾನಗೊಂಡು ಹುಡುಕಿಕೊಂಡು ಹೋದ ವೇಳೆ ಆತ ಆಕಸ್ಮಿಕವಾಗಿ ಕಾಲು ಜಾರಿ ಕುಡಿಯುವ ನೀರಿನ ಟ್ಯಾಂಕ್’ಗೆ ಬಿದ್ದು ಮೃತಪಟ್ಟಿರುವುದು ಗೋಚರಿಸಿದೆ.
ಮೃತರು ತಂದೆ, ತಾಯಿ, ಹಾಗೂ ಸಹೋದರಿಯನ್ನು ಅಗಲಿದ್ದು, ಕೊಡಗು ಸಂಪಾಜೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಡಿಕೇರಿಗೆ ರವಾನಿಸಲಾಗಿದೆ.