ಹೊಸದಿಗಂತ ಡಿಜಿಟಲ್ ಡೆಸ್ಕ್:
ವಯನಾಡು ಭೂಕುಸಿತ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ ಇದೀಗ 249ಕ್ಕೆ ಏರಿಕೆಯಾಗಿದೆ. ಇನ್ನೂ 240 ಮಂದಿ ನಾಪತ್ತೆಯಾಗಿದ್ದು, ಅವರೆಲ್ಲರೂ ಬದುಕಿದ್ದಾರೋ ಇಲ್ಲವೋ ಎಂಬುದು ಕೂಡ ತಿಳಿಯದಂತಾಗಿದೆ.
ವಯನಾಡಿನ ಚೂರಲ್ಮಲಾ ಮತ್ತು ಮುಂಡಕ್ಕೈ ಅವಳಿ ನಗರಗಳು ಒಂದೇ ದಿನದಲ್ಲಿ ಸ್ಮಶಾನದಂತಾಗಿವೆ, ಮನೆಗಳು, ಊರು ಈ ಜಾಗದಲ್ಲಿ ಇದ್ದವೋ ಇಲ್ಲವೋ ಎನ್ನುವ ಅನುಮಾನ ಕಾಡುವಂತಾಗಿದೆ. ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 249ಕ್ಕೆ ಏರಿಕೆಯಾಗಿದೆ ಎಂದು ದೃಢೀಕರಿಸದ ವರದಿಗಳು ತಿಳಿಸಿವೆ. ಅಲ್ಲದೆ 240 ಮಂದಿ ಕಾಣೆಯಾಗಿದ್ದಾರೆ ಎಂದು ವರದಿಗಳು ತಿಳಿಸಿವೆ.
ಮುಂಡಕ್ಕೈನಲ್ಲಿ, ಸುಮಾರು ಶೇ. 90 ರಷ್ಟು ಮನೆಗಳು ನಾಶವಾಗಿವೆ. 10 ಅಡಿ ಎತ್ತರದವರೆಗೆ ಮಣ್ಣಿನಿಂದ ತುಂಬಿವೆ. ಸೇನೆ, ನೌಕಾಪಡೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ಕೋಸ್ಟ್ ಗಾರ್ಡ್, ಅಗ್ನಿಶಾಮಕ ಮತ್ತು ರಕ್ಷಣಾ ಸೇವೆಗಳು, ಪೊಲೀಸ್, ಸಿವಿಲ್ ಡಿಫೆನ್ಸ್ ಫೋರ್ಸ್ ಮತ್ತು ವಿವಿಧ ಎನ್ಜಿಒಗಳ ಸ್ವಯಂಸೇವಕರು ಮೊಣಕಾಲು ಉದ್ದದ ಕೆಸರಿನಲ್ಲಿ ನಾಪತ್ತೆಯಾದವರಿಗಾಗಿ ಹುಡುಕಾಟ ನಡೆದಿದೆ.
ಏತನ್ಮಧ್ಯೆ, ಮುಂಡಕ್ಕಿಯ ರೆಸಾರ್ಟ್ನಲ್ಲಿ ಸಿಲುಕಿದ್ದ 19 ಜನರನ್ನು ರಕ್ಷಿಸಿ ಪರಿಹಾರ ಕೇಂದ್ರಕ್ಕೆ ಕರೆತರಲಾಯಿತು. ಮುಂಡಕ್ಕೈನಿಂದ ಐದು ಮೃತದೇಹಗಳನ್ನು ಹೊರತೆಗೆಯಲಾಗಿದೆ. ರಕ್ಷಣಾ ಕಾರ್ಯಕರ್ತರು ಮುಂಡಕ್ಕೈನ ಪ್ರತಿಯೊಂದು ದೂರದ ಪ್ರದೇಶವನ್ನು ತಲುಪಿದ್ದಾರೆ ಮತ್ತು ಸಿಕ್ಕಿಬಿದ್ದ ಎಲ್ಲಾ ನಿವಾಸಿಗಳನ್ನು ರಕ್ಷಿಸಿದ್ದಾರೆ.
ಸೇತುವೆ ಕೊಚ್ಚಿಹೋಗಿರುವುದರಿಂದ, ನಮಗೆ ಭಾರೀ ಯಂತ್ರೋಪಕರಣಗಳನ್ನು ಈ ಪ್ರದೇಶಕ್ಕೆ ಕೊಂಡೊಯ್ಯಲು ಸಾಧ್ಯವಾಗುತ್ತಿಲ್ಲ. ಕಾಂಕ್ರೀಟ್ ಚಪ್ಪಡಿಗಳನ್ನು ಕತ್ತರಿಸಲು ನಾವು ಕಟ್ಟರ್, ಹಗ್ಗಗಳು ಮತ್ತು ಸಣ್ಣ ಉಪಕರಣಗಳನ್ನು ಬಳಸುತ್ತಿದ್ದೇವೆ. ಕೆ9 ಸ್ಕ್ವಾಡ್ನ ಶ್ವಾನಗಳು ನಾಲ್ಕು ಸ್ಥಳಗಳನ್ನು ಗುರುತಿಸಲು ಸಹಾಯ ಮಾಡಿವೆ ಮತ್ತು ನಾಪತ್ತೆಯಾದವರನ್ನು ಹುಡುಕಲು ನಾವು ಅವಶೇಷಗಳನ್ನು ತೆಗೆದುಹಾಕುತ್ತಿದ್ದಾರೆ ಎನ್ನುವ ಮಾಹಿತಿ ದೊರಕಿದೆ.