ನಾವೆಲ್ಲರೂ ಒಗ್ಗಟ್ಟಿನಿಂದ ಇದ್ದೇವೆ: ಸಚಿವ ಭೈರತಿ ಬಸವರಾಜ

ದಿಗಂತ ವರದಿ ವಿಜಯಪುರ:

ನಮ್ಮಲ್ಲಿ ಯಾವುದೇ ಗೊಂದಲವಿಲ್ಲ. ನಾವೆಲ್ಲರೂ ಒಗ್ಗಟ್ಟಿನಿಂದ ಇದ್ದೇವೆ ಎಂದು ಸಚಿವ ಭೈರತಿ ಬಸವರಾಜ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಿ.ಎಸ್. ಯಡ್ಡಿಯೂರಪ್ಪ ಹಾಗೂ ಹಿರಿಯ ನಾಯಕರ ನೇತೃತ್ವದಲ್ಲಿ ಚುನಾವಣೆ ಎದುರಿಸುತ್ತೇವೆ. ಮತ್ತೇ ರಾಜ್ಯದಲ್ಲಿ ಅಧಿಕಾರಕ್ಕೆ ಬರುವ ಕೆಲಸ ಮಾಡಲಾಗುವುದು. ಆದರೆ, ವಿರೋಧ ಪಕ್ಷದವರು ಇಲ್ಲಸಲ್ಲದ ಆರೋಪ ಮಾಡುತ್ತಾರೆ. ನಮ್ಮ ಕಾರ್ಯಕರ್ತರು ಹುಮ್ಮಸ್ಸುನಿಂದ ಇದ್ದಾರೆ ಎಂದರು. ಅಲ್ಲದೇ, ಬಿ.ಎಸ್. ಯಡಿಯೂರಪ್ಪನವರಿಗೆ ಒಳ್ಳೆಯ ಸ್ಥಾನಮಾನ ನೀಡಲಾಗಿದೆ.
ಬಿಎಸ್ವೈ ಕಡೆಗಣಿಸುವ ಮಾತೇ ಇಲ್ಲ ಎಂದರು.

ಇನ್ನು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿವೈ ವಿಜಯೇಂದ್ರ ಸ್ಪರ್ಧೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಭೈರತಿ, ಯಾರು ಎಲ್ಲಿ ನಿಲ್ಲಬೇಕು ಎನ್ನುವುದು ಪಕ್ಷಕ್ಕೆ ಬಿಟ್ಟಿರುವ ವಿಚಾರ ಆಗಿದೆ.
ಅದನ್ನು ಹೈ ಕಮಾಂಡ್ ಹಾಗೂ ಪಕ್ಷ ತೀರ್ಮಾನ ಮಾಡುತ್ತದೆ ಎಂದರು. ವಿಜಯಪುರ ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಚುನಾವಣೆ ನಡೆಸಲು ಆಯುಕ್ತರು ತಿಳಿಸಿದ್ದಾರೆ. ಆದಷ್ಟು ಬೇಗನೆ ಮೇಯರ್, ಉಪ ಮೇಯರ್ ಚುನಾವಣೆ ನಡೆಯುತ್ತದೆ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!