ಹೊಸ ದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯದಲ್ಲಿ ಮತ್ತೆ ನಾವು ಅಧಿಕಾರಕ್ಕೆ ಬಂದರೇ ಉಚಿತ 10 ಕೆಜಿ ಅಕ್ಕಿ ವಿತರಿಸಲಾಗುತ್ತದೆ ಎಂಬುದಾಗಿ ಮಾಜಿ ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ.
ಮಂಡ್ಯ ಜಿಲ್ಲೆಯ ಕೆಆರ್ ಪೇಟೆಯಲ್ಲಿ ಮಾತನಾಡಿದ ಅವರು, ನಾವು ಮತ್ತೆ ಅಧಿಕಾರಕ್ಕೆ ಬಂದರೇ ಉಚಿತ 10 ಕೆಜಿ ಅಕ್ಕಿ ನೀಡುತ್ತೇವೆ. ಬಿಜೆಪಿಯವರು ಅನ್ನಭಾಗ್ಯ ಯೋಜನೆ ಅಕ್ಕಿ ಕಡಿತ ಮಾಡಿದ್ದಾರೆ. ನಾವು ಅಧಿಕಾರಕ್ಕೆ ಬಂದ್ರೇ 4 ಕೋಟಿ ಜನರಿಗೆ ತಲಾ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತೇವೆ ಎಂದರು.
ಕೆ ಆರ್ ಪೇಟೆಯಲ್ಲಿ ಕಾಂಗ್ರೆಸ್ ಗೆದ್ದರೇ ನನಗೆ ಶಕ್ತಿ ಬಂದಂತೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೇ ಮಾತ್ರ ರಾಜ್ಯ ಉಳಿಸಲು ಸಾಧ್ಯವಿದೆ. ಮಂಡ್ಯದಲ್ಲಿನ 7 ಕ್ಷೇತ್ರಗಳಲ್ಲಿ 7 ಕಾಂಗ್ರೆಸ್ ಗೆದ್ದರೇ ನನಗೆ ಶಕ್ತಿ. ನಾನು ಹೇಳಿದವರಿಗೆ ಮಾತ್ರ ಮತ ಹಾಕಿ ಎಂದು ಹೇಳಿದರು.