ಸಿಎಂ ಸಿದ್ದರಾಮಯ್ಯ ಕಾನೂನಿಗೆ ತಲೆ ಬಾಗುತ್ತಾರೆ ಎಂಬ ವಿಶ್ವಾಸವಿದೆ: ಸೋಮಣ್ಣ

 ಹೊಸದಿಗಂತ ವರದಿ, ಹುಬ್ಬಳ್ಳಿ:

ತಮ್ಮ ಜೀವನ ತೆರದ ಪುಸ್ತಕ ಎಂದು ಹೇಳಿಕೊಳ್ಳುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನ್ಯಾಯಾಲಯ ಪುಸ್ತಕದಲ್ಲಿ ಕೆಲವು ತಪ್ಪುಗಳಾಗಿವೆ ಎಂದು ಹೇಳಿದೆ. ಆದ್ದರಿಂದ ಅವರು ಕಾನೂನಿಗೆ ತಲೆ ಬಾಗುತ್ತಾರೆ ಎಂಬ ವಿಶ್ವಾಸವಿದೆ ಎಂದು ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು.

ರೈಲ್ವೆ ಖಾತೆ ರಾಜ್ಯ ಸಚಿವರಾದ ನಂತರ ಮೊದಲ ಬಾರಿಗೆ ನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ಪಾಲನೆ ಮಾಡಬೇಕಾಗಿರುವುದು ಎಲ್ಲ ಕರ್ತವ್ಯವಾಗಿದೆ. ಈ ಆರೋಪದಿಂದ ಹೊರಬರುವವರೆಗೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದರು.

ರಾಜೀನಾಮೆ ನೀಡುವುದಿಲ್ಲ ಎಂದು ಅವರು ಹೇಳಿಲ್ಲ. ಬೇರೆಯವರು ರಾಜೀನಾಮೆ ನೀಡುವುದಿಲ್ಲ ಎಂದಿದ್ದಾರೆ. ಹಿಂದೆ ಇಂತಹ ಪರಿಸ್ಥಿತಿ ಎದುರಾದಾಗ ರಾಜೀನಾಮೆ ನೀಡಿ ನಂತರ ಅಕಾರ ಪಡೆದುಕೊಂಡಿರುವ ಉದಾಹರಣೆಗಳಿವೆ ಎಂದು ತಿಳಿಸಿದರು.

ಸಿದ್ದರಾಮಯ್ಯ ಅವರೊಂದಿಗೆ ಒಡನಾಟ ಹೊಂದಿದ್ದು, ಅವರನ್ನು ಹತ್ತಿರದಿಂದ ನೋಡಿದ್ದೇನೆ. ಹೀಗಾಗಿ ಸಿದ್ದರಾಮಯ್ಯ ಅವರು ಕಾನೂನಿಗೆ ಗೌರವ ಕೊಡುತ್ತಾರೆ. ಕೋರ್ಟ್ ಆದೇಶದ ಬಳಿಕ ಸಿದ್ದರಾಮಯ್ಯ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ತನಿಖೆ ಬಳಿಕ ಸಿಎಂ ಸ್ಥಾನಕ್ಕೆ ಪುನಃ ಅಧಿಕಾರ ಸ್ವೀಕಾರ ಮಾಡಲಿ. ಬಿಜೆಪಿಯಲ್ಲಿ ಬಣ ರಾಜಕಾರಣವಿಲ್ಲ. ಮನೆಯಲ್ಲಿ ಬಹಳ ಜನ ಬುದ್ದಿವಂತರು ಇದ್ದಾಗ ಸ್ವಲ್ಪ ಭಿನ್ನಾಭಿಪ್ರಾಯ ಬರುವುದು ಸಹಜ ಎಂದರು. ರಾಯಣ್ಣ ಬ್ರಿಗೇಡ್, ಚನ್ನಮ್ಮ ಬ್ರಿಗೇಡ್ ಯಾರು ಮಾಡುತ್ತಿದ್ದಾರೆ ಅವರನ್ನೇ ಕೇಳಿ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!