ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದಲ್ಲಿ ಮತ್ತೆ ಅಧಿಕಾರಕ್ಕೆ ಬರುವ ನಿರೀಕ್ಷೆಯಲ್ಲಿ ಕಾಂಗ್ರೆಸ್ ಪಕ್ಷವಿದ್ದು ಸರ್ಕಾರ ರಚನೆ ಮಾಡಲು ಮಾನಸಿಕವಾಗಿ ಸಿದ್ಧರಾಗಿದ್ದೇವೆ ಎಂದು ತುಮಕೂರಿನಲ್ಲಿ ಮಾಜಿ ಡಿಸಿಎಂ ಡಾ.ಪರಮೇಶ್ವರ್ ತಿಳಿಸಿದ್ದಾರೆ.
ಎಲ್ಲಾ ಕಾಲಕ್ಕೂ ಎಲ್ಲಾ ಸಮೀಕ್ಷೆಗಳು ನಿಜವಾಗುವುದಿಲ್ಲ. ಕೆಲವೊಮ್ಮೆ ಸರ್ವೆ ನಿಜವಾಗಿದೆ, ಇನ್ನು ಕೆಲವು ಬಾರಿ ಸಮೀಕ್ಷೆಯ ವಿರೋಧವಾಗಿ ಫಲಿತಾಂಶ ಬಂದಿದೆ. ಆದ್ರೂ ಮತದಾನೋತ್ತರ ಸಮೀಕ್ಷೆಯಲ್ಲಿ ಕಾಂಗ್ರೆಸ್ ಮುಂದಿದೆ. ಕಾಂಗ್ರೆಸ್ ಪರ ಅಲೆ ಇರುವುದು ಸಾಬೀತಾಗಿದೆ ಎಂದು ಹೇಳಿದ್ದಾರೆ
ಕೊರಟಗೆರೆ ಕ್ಷೇತ್ರದಲ್ಲಿ ನಾನು ಹೆಚ್ಚಿನ ಮತ ಪಡೆದು ಗೆಲ್ಲುತ್ತೇನೆ ಎಂದು ಮಾಜಿ ಡಿಸಿಎಂ ಡಾ.ಪರಮೇಶ್ವರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.