ʻನಾವೇನು ಕಾಂಗ್ರೆಸ್‌ನ ಗುಲಾಮರಲ್ಲ, ನಮ್ಮ ನಿರ್ಧಾರ ನಾವೇ ತೆಗೆದುಕೊಳ್ಳುತ್ತೇವೆʼ

ಹೊಸದಿಗಂತ ಡಿಜಿಟಲ್‌ ಡೆಸ್ಕ್: 

ನೂತನ ಸಂಸತ್‌ ಭವನ ಉದ್ಘಾಟನೆಗೆ ವಿರೋಧ ಪಕ್ಷಗಳು ತಗಾದೆ ತೆಗೆದಿದ್ದು, 19ಪಕ್ಷಗಳು ಸಮಾರಂಭಕ್ಕೆ ಗೈರಾಗುವುದಾಗಿ ತಿಳಿಸಿವೆ. ಭಾಗವಹಿಸುವ ಪಕ್ಷಗಳ ಕುರಿತು ಟೀಕೆ ಮಾಡುತ್ತಿರುವ ಕಾಂಗ್ರೆಸ್‌ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಎನ್‌ಐ ಜೊತೆ ಮಾತನಾಡಿದ ಅವರು,  ನಾವು ಕಾಂಗ್ರೆಸ್‌ನ ಗುಲಾಮರಲ್ಲ, ನಾವು ನಮ್ಮದೇ ನಿರ್ಧಾರ ತೆಗೆದುಕೊಳ್ಳುತ್ತೇವೆ. ನಾವೇಕೆ ಕಾಂಗ್ರೆಸ್ ಅನುಸರಿಸಬೇಕು? ಎಂದು ಗರಂ ಆಗಿದ್ದಾರೆ.

ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವ ಮಾಜಿ ಪ್ರಧಾನಿ ದೇವೇಗೌಡರ ನಿರ್ಧಾರವನ್ನು ಪ್ರಶ್ನಿಸಿದ ಕಾಂಗ್ರೆಸ್ ವಿರುದ್ಧ ಕರ್ನಾಟಕದ ಮಾಜಿ ಸಿಎಂ ಮತ್ತು ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!