ಭಾರತ ಜೊತೆ ಸಮರ ಸಾರೋಕೆ ನಾವು ಸಿದ್ಧ.. ಮತ್ತೊಮ್ಮೆ ನಾಲಿಗೆ ಹರಿಬಿಟ್ಟ ಪಾಪಿ ಪಾಕ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಭಾರತ ಸಿಂಧೂ ನದಿ ನೀರು ಒಪ್ಪಂದವನ್ನು ರದ್ದುಗೊಳಿಸಿದರೆ ನಾವು ಯುದ್ಧಕ್ಕೆ ಸಿದ್ಧರಿದ್ದೇವೆ ಎಂದು ಪಾಕಿಸ್ತಾನದ ಗೃಹ ಸಚಿವ ಮೊಹ್ಸಿನ್ ನಖ್ವಿ ನಾಲಿಗೆ ಹರಿಬಿಟ್ಟಿದ್ದಾರೆ.

ಭಾರತವು ಸಿಂಧೂ ಜಲ ಒಪ್ಪಂದವನ್ನ ಏಕಪಕ್ಷೀಯವಾಗಿ ಕೊನೆಗೊಳಿಸಲು ಸಾಧ್ಯವಿಲ್ಲ. ವಿಶ್ವಬ್ಯಾಂಕ್ ಈ ಒಪ್ಪಂದದ ಮಧ್ಯಸ್ಥಿಕೆ ವಹಿಸಿದೆ. ಅಂತಹ ಯಾವುದೇ ಕ್ರಮ ಕೈಗೊಂಡರೆ, ಪಾಕಿಸ್ತಾನ ಯುದ್ಧಕ್ಕೆ ಸಿದ್ಧವಾಗಿದೆ ಎಂದು ನಖ್ವಿ ಎಚ್ಚರಿಕೆ ನೀಡಿದ್ದಾರೆ.

ಸಿಂಧೂ ಜಲ ಒಪ್ಪಂದ ರದ್ದುಗೊಳಿಸುವುದು ಸೇರಿದಂತೆ ಹಲವು ಕಠಿಣ ಕ್ರಮಗಳನ್ನು ಭಾರತ ಸರ್ಕಾರ ತೆಗೆದುಕೊಂಡ ಬಳಿಕ ಪಾಕಿಸ್ತಾನದ ಹಲವು ಸಚಿವರು ತಮ್ಮ ನಿಜವಾದ ಬಣ್ಣವನ್ನು ಹೊರ ಹಾಕ್ತಿದ್ದಾರೆ. ಸಿಂಧೂ ನೀರು ಪಾಕ್‌ಗೆ ಹರಿಯಬೇಕು, ಇಲ್ಲದಿದ್ರೆ ಭಾರತೀಯರ ರಕ್ತ ಹರಿಯುತ್ತೆ ಎಂದು ಪಾಕಿಸ್ತಾನ ಪೀಪಲ್ಸ್‌ ಪಾರ್ಟಿ ಅಧ್ಯಕ್ಷ ಬಿಲಾವಲ್‌ ಭುಟ್ಟೋ ಹೇಳಿದ್ದರು. ಇದೀಗ ನಖ್ವಿ ಯುದ್ಧಕ್ಕೆ ಸಿದ್ಧ ಎಂದು ಸವಾಲು ಹಾಕಿದ್ದಾರೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!