ಬಿಜೆಪಿಯ ಭದ್ರಕೋಟೆ ಬೇಧಿಸಿದ್ದೇವೆ: ಪೊನ್ನಣ್ಣ- ಮಂಥರ್

ಹೊಸ ದಿಗಂತ ವರದಿ, ಮಡಿಕೇರಿ:

ಕಾರ್ಯಕರ್ತರ ಒಗ್ಗಟ್ಟಿನ ಹೋರಾಟದ ಪರಿಶ್ರಮವೇ ತಮ್ಮ ಗೆಲುವಿಗೆ ಕಾರಣವಾಗಿದೆ. ನನ್ನನ್ನು ಹೊರಗಿನ ಅಭ್ಯರ್ಥಿ ಎಂದು ವ್ಯಂಗ್ಯವಾಡಿದವರಿಗೆ ಮತದಾರರೇ ತಕ್ಕ ಉತ್ತರ ನೀಡುವ ಮೂಲಕ ಅವರನ್ನೇ ಹೊರಗೆ ಕಳುಹಿಸಿದ್ದಾರೆ ಎಂದು ಕಾಂಗ್ರೆಸ್ ಅಭ್ಯರ್ಥಿ ಎ.ಎಸ್. ಪೊನ್ನಣ್ಣ ತಿರುಗೇಟು ನೀಡಿದರು.

ಫಲಿತಾಂಶ ಪ್ರಕಟವಾದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪೊನ್ನಣ್ಣ, ತಮ್ಮ ಗೆಲುವಿಗೆ ಶ್ರಮಿಸಿದ ಎಲ್ಲಾ ಕಾರ್ಯಕರ್ತರು ಮತ್ತು ಮತದಾರರಿಗೆ ಧನ್ಯವಾದ ಸಲ್ಲಿಸಿದರು. ಎರಡೂ ಕ್ಷೇತ್ರಗಳಲ್ಲಿ ಭರ್ಜರಿ ಗೆಲುವು ಸಾಧಿಸಿದ್ದೇವೆ. ಆ ಮೂಲಕ ಬಿಜೆಪಿಯ ಭದ್ರಕೋಟೆಯನ್ನು ಬೇಧಿಸಿದ್ದೇವೆ ಎಂದು ಹರ್ಷ ವ್ಯಕ್ತಪಡಿಸಿದರು. ಚುನಾವಣೆ ಸಂದರ್ಭ ಕ್ಷೇತ್ರದ ಪ್ರಗತಿಯ ಕುರಿತು ಮತದಾರರಿಗೆ ಭರವಸೆ ನೀಡಿದ್ದೇನೆ. ಅದರಂತೆ ಅಭಿವೃದ್ದಿ ಕಾರ್ಯಗಳನ್ನು ಮಾಡುವುದಾಗಿ ಪೊನ್ನಣ್ಣ ಹೇಳಿದರು.

ಕ್ಷೇತ್ರದ ಪ್ರಗತಿಗೆ ಬದ್ಧ: ಮಡಿಕೇರಿ ಕ್ಷೇತ್ರದ ವಿಜೇತ ಅಭ್ಯರ್ಥಿ ಡಾ.ಮಂಥರ್ ಗೌಡ ಮಾತನಾಡಿ, ನನ್ನ ಗೆಲುವಿಗೆ ಶ್ರಮಿಸಿದ ಪಕ್ಷದ ಕಾರ್ಯಕರ್ತರು, ಮುಖಂಡರು ಮತ್ತು ಮತದಾರರಿಗೆ ಧನ್ಯವಾದ ಸಲ್ಲಿಸಿದರು. ಈಗಾಗಲೇ ನೀಡಿರುವ ಭರವಸೆಯಂತೆ ಮಡಿಕೇರಿ ಕ್ಷೇತ್ರದ ಪ್ರಗತಿಗೆ ಬದ್ಧನಾಗಿದ್ದೇನೆ ಎಂದು ಸ್ಪಷ್ಟಪಡಿಸಿದರು.

ನನ್ನನ್ನು ಹೊರಗಿನಿಂದ ಬಂದವನು ಎಂದು ಟೀಕಿಸಿದ್ದರು. ಆದರೆ ಮತದಾರರು ಮಾತ್ರ ಪ್ರೀತಿಯಿಂದ ಕೊಡಗಿನ ಹುಡುಗನ ಕೈ ಹಿಡಿದಿದ್ದಾರೆ. ಮುಂದಿನ ದಿನಗಳಲ್ಲಿ ಖಂಡಿತವಾಗಿ ದ್ವೇಷ ರಾಜಕೀಯ ಮಾಡದೇ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಮಡಿಕೇರಿ ಕ್ಷೇತ್ರದ ಪ್ರಗತಿಗೆ ಶ್ರಮಿಸುವುದಾಗಿ ಹೇಳಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!