ಹೊಸದಿಗಂತ ಡಿಜಿಟಲ್ ಡೆಸ್ಕ್:
ವಿಪಕ್ಷ ಮೈತ್ರಿಕೂಟ 14 ಟಿವಿ ಆಂಕರ್ಗಳ ಪಟ್ಟಿಯನ್ನು ಬಿಡುಗಡೆ ಮಾಡಿ ದ್ವೇಷ ತುಂಬಿದ ಸುದ್ದಿಗಳು ಪ್ರಚೋದನಾಕಾರಿ ಚರ್ಚೆಗಳಲ್ಲಿ ಭಾಗವಹಿಸದಿರುವುದರ ನಿರ್ಧಾರ ತೆಗೆದುಗೊಂಡಿದ್ದು, ಈ ಕುರಿತು ಸ್ಪಷ್ಟನೆ ನೀಡಿದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (CWC) ಸದಸ್ಯ ಮತ್ತು ಪಕ್ಷದ ಹಿರಿಯ ನಾಯಕ ಪವನ್ ಖೇರಾ (Pawan Khera), ಪ್ರತಿಪಕ್ಷಗಳು ಕೆಲವು ವಿಭಾಗಗಳನ್ನು ಬಹಿಷ್ಕರಿಸುತ್ತಿಲ್ಲ ಅಥವಾ ನಿಷೇಧಿಸುತ್ತಿಲ್ಲ. ಇದು ಅಸಹಕಾರ ಚಳವಳಿ ಎಂದು ಹೇಳಿದ್ದಾರೆ.
ಹೈದರಾಬಾದ್ನಲ್ಲಿ ನಡೆದ ಸಿಡಬ್ಲ್ಯುಸಿ ಸಭೆಗೆ ಮುನ್ನ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಖೇರಾ, ನಾವು ಯಾರನ್ನೂ ನಿಷೇಧಿಸಿಲ್ಲ, ಬಹಿಷ್ಕರಿಸಿಲ್ಲ ಅಥವಾ ಕಪ್ಪು ಪಟ್ಟಿಗೆ ಸೇರಿಸಿಲ್ಲಎಂದು ಸ್ಪಷ್ಟಪಡಿಸಿದರು.
ಸಮಾಜದಲ್ಲಿ ದ್ವೇಷವನ್ನು ಹರಡುವ ಯಾರೊಂದಿಗೂ ನಾವು ಸಹಕರಿಸುವುದಿಲ್ಲ.ಅವರು ನಮ್ಮ ಶತ್ರುಗಳಲ್ಲ. ಯಾವುದೂ ಶಾಶ್ವತವಲ್ಲ, ನಾಳೆ ಅವರು ಮಾಡುತ್ತಿರುವುದು ಭಾರತಕ್ಕೆ ಒಳ್ಳೆಯದಲ್ಲ ಎಂದು ಅವರು ಅರಿತುಕೊಂಡರೆ, ನಾವು ಮತ್ತೆ ಅವರ ಕಾರ್ಯಕ್ರಮಗಳಿಗೆ ಹಾಜರಾಗಲು ಪ್ರಾರಂಭಿಸುತ್ತೇವೆ ಎಂದು ಹೇಳಿದ್ದಾರೆ.
ಇಂಡಿಯಾ ಮೈತ್ರಿಕೂಟವು ಇತ್ತೀಚಿಗೆ ತೆಗೆದುಕೊಂಡ ನಿರ್ಧಾರಗಳಲ್ಲಿ, 14 ಟಿವಿ ಆಂಕರ್ಗಳ ಪಟ್ಟಿಯನ್ನು ಬಿಡುಗಡೆ ಮಾಡಿ, ಇವರು “ದ್ವೇಷ ತುಂಬಿದ” ಸುದ್ದಿ ಚರ್ಚೆಗಳನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.