ಹೊಸದಿಗಂತ ಡಿಜಿಟಲ್ ಡೆಸ್ಕ್:
ಮೈತ್ರಿಕೂಟ ತೊರೆದು ಮತ್ತೆ ಬಿಜೆಪಿ ಜೊತೆ ಸೇರಿ ಬಿಹಾರ ಸಿಎಂ ನಿತೀಶ್ ಕುಮಾರ್ (Nitish Kumar) ಸರ್ಕಾರ ರಚಿಸಿದ್ದು, ಈ ಕುರಿತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಮೌನ ಮುರಿದಿದ್ದಾರೆ.
ಭಾರತ್ ಜೋಡೊ ನ್ಯಾಯ ಯಾತ್ರೆ (Bharat Jodo Nyay Yatra) ಕೈಗೊಂಡಿರುವ ರಾಹುಲ್ ಗಾಂಧಿ ಅವರು, ಬಿಹಾರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು. ನಮಗೆ ನಿತೀಶ್ ಕುಮಾರ್ ಅಗತ್ಯವಿಲ್ಲ. ಒತ್ತಡಕ್ಕೆ ಒಳಗಾಗಿ ಅವರು ಯೂ-ಟರ್ನ್ ಮಾಡುತ್ತಾರೆ ಎಂದು ಹೇಳಿದ್ದಾರೆ.
ರಾಜ್ಯಪಾಲರಿಗೆ ಬಹಳ ಆಶ್ಚರ್ಯವಾಯಿತು. ‘ಏನು ನಿತೀಶ್-ಜಿ ನೀವು ಇಷ್ಟು ಬೇಗ ಹಿಂತಿರುಗಿದ್ದೀರಿ?’ ಅವರು ಕೇಳಿದ್ದರು. ನಿತೀಶ್ ಕುಮಾರ್ ಅವರು ಹಾಗೆಯೇ ಎಂದು ರಾಹುಲ್ ಗಾಂಧಿ ಚಾಟಿ ಬೀಸಿದ್ದಾರೆ.