‘ದೇಶಪ್ರೇಮದ ಪಾಠ ಇವರಿಂದ ಕಲಿಯಬೇಕಿಲ್ಲ’: ಧ್ವಜಾರೋಹಣ ವಿವಾದಕ್ಕೆ ಸಚಿವ ಜಮೀರ್ ಅಹ್ಮದ್ ಖಾನ್ ತಿರುಗೇಟು

ಹೊಸದಿಗಂತ ಡಿಜಿಟಲ್ ಡೆಸ್ಕ್: ಸ್ವಾತಂತ್ರ್ಯೋತ್ಸವದಂದು ವಿಜಯನಗರ ಜಿಲ್ಲೆಯಲ್ಲಿ ಧ್ವಜಾರೋಹಣದಿಂದ ವಿನಾಯಿತಿ ಕೋರಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಎದುರಾಗಿರುವ ರಾಜಕೀಯ ಟೀಕೆಗೆ ಸಚಿವ ಜಮೀರ್ ಅಹ್ಮದ್ ಖಾನ್ ಸ್ಪಷ್ಟನೆ ನೀಡಿದ್ದಾರೆ. ತಾವು ದೇಶಭಕ್ತಿ ಹಾಗೂ ಕನ್ನಡತನದ ಬಗ್ಗೆ ಯಾರಿಂದಲೂ ಪಾಠ ಕಲಿಯಬೇಕಿಲ್ಲ ಎಂದು ಪ್ರತಿಪಕ್ಷಗಳ ಆರೋಪಗಳಿಗೆ ತಿರುಗೇಟು ನೀಡಿದ್ದಾರೆ. ಈದ್ಗಾ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವ ಚಾಮರಾಜಪೇಟೆ ಕ್ಷೇತ್ರದ ಐತಿಹಾಸಿಕ ಈದ್ಗಾ ಮೈದಾನದಲ್ಲಿ ನಡೆದ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಖಾನ್ ಭಾಗವಹಿಸಿ ಕಾರ್ಯಕ್ರಮದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ತಮ್ಮ ವಿರುದ್ಧ … Continue reading ‘ದೇಶಪ್ರೇಮದ ಪಾಠ ಇವರಿಂದ ಕಲಿಯಬೇಕಿಲ್ಲ’: ಧ್ವಜಾರೋಹಣ ವಿವಾದಕ್ಕೆ ಸಚಿವ ಜಮೀರ್ ಅಹ್ಮದ್ ಖಾನ್ ತಿರುಗೇಟು