ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯಾದ್ಯಂತ ಅಕ್ಕಿ ಗಲಾಟೆ ಜೋರಾಗಿ ನಡೆಯುತ್ತಿದೆ, ಕೇಂದ್ರ ಸರ್ಕಾರ ಹೇಳಿದಂತೆ ನಡೆದುಕೊಳ್ಳದೆ ಮೋಸ ಮಾಡಿದೆ ಎಂದು ಕಾಂಗ್ರೆಸ್ ಹೇಳ್ತಿದೆ. ಇತ್ತ ಬಿಜೆಪಿ ಕೇಂದ್ರದ ಮೇಲೆ ಗೂಬೆ ಕೂರಿಸೋದು ಬಿಟ್ಟು ಹೇಳಿದ್ದನ್ನು ಮಾಡಿ, ಬಡವರಿಗೆ ಮೋಸ ಮಾಡ್ಬೇಡಿ ಎಂದು ಪ್ರತಿಭಟನೆ ಮಾಡುತ್ತಿದೆ.
ಈ ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಧ್ವನಿಯೆತ್ತಿದ್ದು, ಪ್ರಧಾನಿ ಮೋದಿ ಅವರು ದೊಡ್ಡ ಮನಸ್ಸು ಮಾಡಿದ್ರೆ ನಮಗೆ ಅಕ್ಕಿ ಸಿಗುತ್ತದೆ ಎಂದಿದ್ದಾರೆ. ಅವರು ಈಗಲೂ ಮನಸ್ಸು ಮಾಡಬಹುದು, ಮಾಡಲಿಲ್ಲ ಎಂದರೆ ಕಾನೂನಾತ್ಮಕ ಹೋರಾಟಕ್ಕೂ ಸಿದ್ಧರಿದ್ದೇವೆ ಎಂದಿದ್ದಾರೆ.