ಜನರ ವಿಶ್ವಾಸ ಸಂಪಾದನೆ ಮಾಡಿದ್ದೇವೆ: ಸಚಿವ ಅಶ್ವತ್ಥ್ ನಾರಾಯಣ

ಹೊಸದಿಗಂತ ವರದಿ ಕಲಬುರಗಿ:

ರಾಜ್ಯದ ಜನತೆಯ ವಿಶ್ವಾಸವನ್ನು ಸಂಪೂಣ೯ವಾಇ ಗಳಿಸುವಲ್ಲಿ ರಾಜ್ಯ ಬಿಜೆಪಿ ಸಕಾ೯ರ ಸಫಲವಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಅಶ್ವಥ್ ನಾರಾಯಣ್ ಹೇಳಿದ್ದಾರೆ.

ಶನಿವಾರ ಕಲಬುರಗಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,2023ರ ಚುನಾವಣೆ ಸಂಬಂಧಿಸಿದಂತೆ ಪಕ್ಷ ಸಂಘಟನೆ ಮಾಡುವುದು ಅವಿರತವಾಗಿರುತ್ತದೆ.ಬಿಜೆಪಿ ಕೂಡ ರಾಜ್ಯದಲ್ಲಿ ಸಂಘಟನೆ ಕಾಯ೯ ಮಾಡಿ,ಜನಪರ ಪಕ್ಷವಾಗಿ ಹೊರಹೊಮ್ಮಿದೆ ಎಂದರು.

ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ.ಯಡಿಯೂರಪ್ಪ ಕೇಂದ್ರ ಚುನಾವಣಾ ಸಮಿತಿಯ ಸದಸ್ಯರ ಜೊತೆಗೆ, ನಮ್ಮ ಅಗ್ರಗಣ್ಯ ನಾಯಕರಾಗಿದ್ದರೆ.ಅವರ ಮಾಗ೯ದಶ೯ನದಲ್ಲೆ ನಾವೆಲ್ಲರೂ ಕೆಲಸ ಮಾಡುತ್ತಿದ್ದೇವೆ ಎಂದರು.

ವಿರೋಧ ಪಕ್ಷದ ನಾಯಕರು ಇಲ್ಲಸಲ್ಲದ ಸುಳ್ಳು ಆರೋಪ ಮಾಡುತ್ತಿದ್ದು,ತಲೆ ಕೆಡಿಸಿಕೊಳ್ಳುವುದಿಲ್ಲ. ಜಮೀರ್ ಅಹ್ಮದ್ ಅವರಿಗೆ 500 ಕೋಟಿ ಆಫರ್ ವಿಚಾರವು ಸಹ ಅದೊಂದು ಗಾಳಿ ಸುದ್ದಿಯಾಗಿದ್ದು,ಅದರ ಬಗ್ಗೆ ನನಗೆ ಗೊತ್ತಿಲ್ಲ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!