ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಸಿಡಿ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಸರ್ವ ಸ್ವತಂತ್ರವಾಗಿದ್ದು, ಪೂರ್ಣ ಪ್ರಮಾಣದ ಅಧಿಕಾರವನ್ನು ಕೊಟ್ಟಿದ್ದೇವೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಸಿಡಿ ಪ್ರಕರಣದ ಕುರಿತು ಎಸ್ಐಟಿ ತನಿಖೆ ನಡೆಯುತ್ತಿದೆ. ಅವರ ತನಿಖೆ ವಿಚಾರದಲ್ಲಿ ಏನೂ ಮಾತನಾಡಲ್ಲ ಎಂದರು.
ಸೋಮವಾರದಿಂದ ಸದನದಲ್ಲಿ ಯತ್ನಾಳ್ ಪ್ರತಿಭಟನೆ ನಡೆಸುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಯತ್ನಾಳ್ ಜೊತೆ ಈಗಾಗಲೇ ಮಾತನಾಡಿದ್ದೇವೆ. ಹಿಂದುಳಿದ ವರ್ಗಗಳ ಆಯೋಗಕ್ಕೆ ವರದಿ ಕೊಡಲು ಹೇಳಿದ್ದೇವೆ. ಹಾಗಾಗಿ ಪ್ರತಿಭಟನೆ ಬೇಡ ಎಂದು ಮನವಿ ಮಾಡಿದ್ದೇವೆ. ಆಯೋಗ ಸ್ವಾಮೀಜಿಗಳಿಗೆ ವಿಚಾರಣೆಗೆ ಆಹ್ವಾನಿಸಿದೆ. ಅವರು ಆಯೋಗದ ಮುಂದೆ ಹಾಜರಾಗುತ್ತಾರೋ, ಇಲ್ಲವೋ ಎಂಬುದನ್ನು ಈಗಲೇ ಊಹೆ ಮಾಡಿ ಹೇಳುವುದಕ್ಕೆ ಆಗುವುದಿಲ್ಲ ಎಂದು ವಿವರಿಸಿದರು
ಶಿವಮೊಗ್ಗ ಚಲೋ ಪ್ರತಿಭಟನೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ನವರು ಪ್ರತಿಭಟನೆ ಮಾಡಲಿ, ನೋಡೋಣ ಏನಾಗುತ್ತೆ ಎಂದರು.