ಹೊಸದಿಗಂತ ಡಿಜಿಟಲ್ ಡೆಸ್ಕ್:
ಜೆಡಿಎಸ್ನವರನ್ನು ಈ ದೇಶದ ಪ್ರಧಾನಿಯಾಗಿ, ರಾಜ್ಯದ ಮುಖ್ಯಮಂತ್ರಿಯಾಗಿ ನೇಮಿಸಿದ್ದೇವೆ. ಈ ದೇಶ ಗುರುತಿಸುವಂತಹ ಕೆಲಸಗಳನ್ನು ಕಾಂಗ್ರೆಸ್ ಪಕ್ಷ ಮಾಡಿದೆ.
ಕಾಂಗ್ರೆಸ್ ಪಕ್ಷ ದೇವೇಗೌಡರನ್ನು ಪ್ರಧಾನಿಯನ್ನಾಗಿ ನೇಮಿಸದೇ ಇದ್ದಿದ್ದರೆ ಈ ದೇಶ ಅವರನ್ನು ನೆನಪಿಸಿಕೊಳ್ಳುತ್ತಿರಲಿಲ್ಲ. ರಾಜ್ಯದ 30 ಮುಖ್ಯಮಂತ್ರಿಗಳ ಪೈಕಿ ಕುಮಾರಸ್ವಾಮಿ ಒಬ್ಬರಾಗುತ್ತಿರಲಿಲ್ಲ ಎಂದು ಸಂಸದ ಡಿ.ಕೆ.ಸುರೇಶ್ ಹೇಳಿದ್ದಾರೆ.
ಕಾಂಗ್ರೆಸ್ ನಂತೆ ಬಿಜೆಪಿ ಮೋಸ ಮಾಡಿಲ್ಲ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಾವು ಯಾರಿಗೂ ಮೋಸ ಮಾಡಿಲ್ಲ. ಜೆಡಿಎಸ್ನವರನ್ನು ಈ ದೇಶ ಗುರುತಿಸುವಂತಹ ಕೆಲಸಗಳನ್ನು ಮಾಡಿರುವುದು ಕಾಂಗ್ರೆಸ್. ನಮ್ಮ ಪಕ್ಷ ಅವರನ್ನು ಪ್ರಧಾನಿಯನ್ನಾಗಿ ಮಾಡದೇ ಹೋಗಿದ್ದರೆ ಈ ದೇಶ ಅವರನ್ನು ನೆನಪಿಸಿಕೊಳ್ಳುತ್ತಿರಲಿಲ್ಲ. ಕುಮಾರಸ್ವಾಮಿ ಮುಖ್ಯಮಂತ್ರಿಯೂ ಆಗುತ್ತಿರಲಿಲ್ಲ ಎಂದು ಕುಮಾರಸ್ವಾಮಿ ಅವರಿಗೆ ಡಿ.ಕೆ.ಸುರೇಶ್ ತಿರುಗೇಟು ನೀಡಿದ್ದಾರೆ .