ಹೊಸದಿಗಂತ ವರದಿ ಹುಬ್ಬಳ್ಳಿ:
ಪೆನ್ಡ್ರೈವ್ ಹಂಚಿದ್ರೆ ಏನ್ ಸಿಗತ್ತೆ ಇವರಿಗೆ? ನೂರಾರು ಹೆಣ್ಣುಮಕ್ಕಳ ಮಾನ ಮರ್ಯಾದಿ ಪ್ರಶ್ನೆ ಅಲ್ವಾ? ಪೆನ್ಡ್ರೈವ್ ಹಂಚಿರೋದು ಡಿಕೆ ಶಿವಕುಮಾರ್ ಕಾರ್ಯಕರ್ತರೇ. ಮಹಿಳೆಯರ ಮಾನ ಕಾಪಾಡೋದು ಸರ್ಕಾರದ ಜವಾಬ್ದಾರಿ ಅಲ್ವಾ ಎಂದು ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಗರಂ ಆಗಿದ್ದಾರೆ.
ಪ್ರಜ್ವಲ ರೇವಣ್ಣ ಪ್ರಕರಣದ ತನಿಖೆ ನಡೆಸುವುದರ ಜೊತೆಗೆ ಅಶ್ಲೀಲ ವಿಡಿಯೋಗಳ ಪೆನ್ ಡ್ರೈವ್ ಹಂಚಿದ ಮಹಾನ್ ನಾಯಕ ಯಾರು ಎಂಬುದರ ಬಗ್ಗೆಯೂ ತನಿಖೆ ಆಗಬೇಕು. ನಾವು ಯಾವುದೇ ಕಾರಣಕ್ಕೂ ಈ ಪ್ರಕರಣದಿಂದ ಪಲಾಯನ ಮಾಡಲ್ಲ ಎಂದರು. ಸದ್ಯ ತನಿಖೆ ನಡೆಯುತ್ತಿದೆ. ಇದರಿಂದ ಸತ್ಯಾಸತ್ಯತೆ ಹೊರಬರುವುದು ಒಂದು ಭಾಗವಾದರೆ, ಯಾವ ಕಾರಣಕ್ಕಾಗಿ ಪೆನ್ ಡ್ರೈವ್ ಸರಕ್ಯೂಲೇಟ್ ಮಾಡಿದರೂ ಎಂಬುದು ರಾಜ್ಯದ ಜನತೆಗೆ ತಿಳಿಯಬೇಕಿದೆ ಎಂದರು.