ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಿದ್ದರಾಮಯ್ಯ ಅವರು ನಮಗೆ ಬೇಕೆ ಬೇಕು. ಮುಂದಿನ ಚುನಾವಣೆ ಗೆಲ್ಲಬೇಕು ಅಂದರೆ ಸಿದ್ದರಾಮಯ್ಯ ಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವ್ರು ನಮಗೆ ಬೇಕೆ ಬೇಕು. ಹಿಂದೆಯೂ ಇದನ್ನ ಹೇಳಿದ್ದೆ, ಈಗಲೂ ಹೇಳ್ತೇನೆ. ಚುನಾವಣೆಗೆ ನಿಲ್ಲದಿದ್ದರೂ, ರಾಜಕೀಯ ನಿವೃತ್ತಿಯಾದರೂ ಅವರು ಬೇಕು. ಮುಂದಿನ ನಾಯಕತ್ವ ಬೆಳೆಸೋವರೆಗೂ ರಾಜಕಾರಣದಲ್ಲಿ ಇರಬೇಕು ಎಂದು ಆಶಯ ವ್ಯಕ್ತಪಡಿಸಿದರು.