ಹೊಸದಿಗಂತ ಡಿಜಿಟಲ್ ಡೆಸ್ಕ್:
ಲಂಚ ಪ್ರಕರಣದಲ್ಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಸಿಕ್ಕಿಹಾಕಿಕೊಂಡಿದ್ದು, 40% ಕಮಿಷನ್ ಸರ್ಕಾರ ಅಂತ ನಾವು ಇದನ್ನೆ ಹೇಳ್ತಿದ್ದದ್ದು ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
ಅಮಿತ್ ಶಾ ಅವರು ರಾಜ್ಯಕ್ಕೆ ಬಂದಿದ್ದಾರೆ, ನಿಮ್ಮ ಡಬಲ್ ಇಂಜಿನ್ ಸರ್ಕಾರ 40% ಕಮಿಷನ್ ಉಡಾಯಿಸುತ್ತಿದೆ ಎನ್ನೋದಕ್ಕೆ ಇಲ್ಲೇ ಉದಾಹರಣೆ ಸಿಕ್ಕಿದೆ. 40% ಕೊಚ್ಚೆಯಲ್ಲಿ ಸರ್ಕಾರ ಉರುಳಾಡುತ್ತಿದೆ ಅನ್ನೋದಕ್ಕೆ ಇದಕ್ಕಿಂತ ತಾಜಾ ಉದಾಹರಣೆ ಬೇಕಿಲ್ಲ. ಶಾಸಕರ ಪುತ್ರರತ್ನಗಳೇ ಹೀಗೆ, ಇನ್ನು ಶಾಸಕರ ಕಥೆ ಏನು? ಇನ್ನೆಷ್ಟು ಶಾಸಕರು ನಮಗೆ ಸಿಗಬಹುದು ಎಂದು ಪ್ರಶ್ನಿಸಿದ್ದಾರೆ.
ರಾಜ್ಯಕ್ಕೆ ಮತ್ತೆ ಇಂದು ಹಾರಿ ಬಂದ @AmitShah ಅವರಿಗೆ ಹಾರ್ದಿಕ ಸ್ವಾಗತ.. ಸುಸ್ವಾಗತ.
ನಿಮ್ಮ ಡಬಲ್ ಎಂಜಿನ್ @BJP4Karnataka ಸರಕಾರ ಭರ್ತಿ 40% ಕಮೀಷನ್ ಉಡಾಯಿಸುತ್ತಿದೆ ಎನ್ನುವುಕ್ಕೆ ನಿಮ್ಮ ಶಾಸಕ ಮಾಡಾಳು ವಿರೂಪಾಕ್ಷಪ್ಪ ಅವರ ಪುತ್ರನ ಕಂತೆ ಕಂತೆಗಳ ಪುರಾಣವೇ ದೊಡ್ಡ ಪುರಾವೆ. 1/9#ಕಮೀಷನ್_ರಾಜ್ಯವಲ್ಲ_ಕರ್ನಾಟಕ— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 3, 2023