ನಮಗೆ 60,000 ಕೋಟಿ ಕೊಡಬೇಕಿತ್ತು: ಬಜೆಟ್ ಕುರಿತು ಸಚಿವ ಜಮೀರ್ ಅಹ್ಮದ್ ಖಾನ್

ಹೊಸದಿಗಂತ ಡಿಜಿಟಲ್ ಡೆಸ್ಕ್:

ಸಿಎಂ ಸಿದ್ದರಾಮಯ್ಯ ಬಜೆಟ್ ನಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಿರುವ ಕೊಡುಗೆಗಳ ಭಾರಿ ಚರ್ಚೆಯಾಗುತ್ತಿದೆ.ಮಸೀದಿ ಇಮಾಮ್‌ಗಳ ಗೌರವಧನ ಹೆಚ್ಚಳ- ವಕ್ಪ್ ಸಂಸ್ಥೆಗಳ ಜೀರ್ಣೋದ್ಧಾರ ಸೇರಿದಂತೆ ಒಟ್ಟು 4,700 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದಾರೆ.

ಇತ್ತ ಸಿಎಂ ಸಿದ್ದರಾಮಯ್ಯ ಬಜೆಟ್ ನ್ನು ಬಿಜೆಪಿ ಟೀಕಿಸುತ್ತಿದ್ದು, ಇದಕ್ಕೆ ಪ್ರತಿಕ್ರಿಯೆ ನೀಡಿರುವ ಸಚಿವ ಜಮೀರ್ ಅಹ್ಮದ್ ಖಾನ್, ಬಿಜೆಪಿ ಅವರಿಗೆ ಹೇಳೋದಕ್ಕೆ ಏನಿದೆ? ಎಂದು ಪ್ರಶ್ನಿಸಿದ್ದಾರೆ.

ಇದು ಮುಸ್ಲಿಂ ಬಜೆಟ್ ಹೇಗೆ ಆಗಲು ಸಾಧ್ಯ? ರಾಜ್ಯದ ಒಟ್ಟು ಜನಸಂಖ್ಯೆಯ ಶೇ.14 ರಷ್ಟು ಮುಸ್ಲಿಂ ಸಮುದಾಯದವರಿದ್ದಾರೆ. ನಮ್ಮ ಜನಸಂಖ್ಯೆಯ ಪ್ರಕಾರ ನೋಡೋಕೆ ಹೋದರೆ, ಮುಸ್ಲಿಂ ಸಮುದಾಯಕ್ಕೆ ಕನಿಷ್ಠ 60,000 ಕೋಟಿ ರೂಪಾಯಿಗಳನ್ನು ಕೊಡಬೇಕಿತ್ತು. ಆದರೆ ಕೊಟ್ಟಿರುವುದು ಕೇವಲ 4,700 ಕೋಟಿಯಷ್ಟೇ . ಬಿಜೆಪಿಯವರಿಗೆ ಅಷ್ಟೂ ಕಾಮನ್ ಸೆನ್ಸ್ ಇಲ್ವಾ? ಎಂದು ಪ್ರಶ್ನಿಸಿರುವ ಜಮೀರ್ ಅಹ್ಮದ್ ಎಲ್ಲಕ್ಕಿಂತ ಹೆಚ್ಚಾಗಿ ಶಿಕ್ಷಣ ಕ್ಷೇತ್ರಕ್ಕೆ ಕೊಟ್ಟಿದ್ದಾರೆ ಎಂದು ಹೇಳಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!