ಅವರು ಮಾಡಿದ ಅಡುಗೆ ಅವ್ರೇ ಬಡಿಸಬೇಕಿತ್ತು: ಮಾಜಿ ಸಿಎಂ ಜಗದೀಶ್ ಶೆಟ್ಟರ್

ಹೊಸದಿಗಂತ ವರದಿ ಹುಬ್ಬಳ್ಳಿ:

ಕಾಂಗ್ರೆಸ್ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಾವು‌ ಮಾಡಿದ ಅಡುಗೆ ಬಿಜೆಪಿಯವರು ಬಡಿಸಿದ್ದಾರೆ ಎನ್ನವ ಅವರು, ತಾವೇ ಏಕೆ ಆ ಸಮಯದಲ್ಲಿ ಬಡಿಸಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಪ್ರಶ್ನಿಸಿದರು.

ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ತಾಂಡ ನಿವಾಸಿಗಳಿಗೆ ರಾಜ್ಯ ಸರ್ಕಾರದಿಂದ ಹಕ್ಕುಪತ್ರ ವಿತರಣೆ ಮಾಡಿದ ಕುರಿತು ಸಿದ್ದರಾಮಯ್ಯ ಅವರು ನೀಡಿದ ಹೇಳಿಕೆಗೆ ತಿರುಗೇಟು ನೀಡಿದರು.
ಕಾಂಗ್ರೆಸ್ ಸರ್ಕಾರ ಕೇಂದ್ರ ಹಾಗೂ ರಾಜ್ಯದಲ್ಲಿ 60 ವರ್ಷ ಅಧಿಕಾರದಲ್ಲಿದ್ದರು ಯಾಕೆ‌ ತಾಂಡ ನಿವಾಸಿಗಳಿಗೆ ಹಕ್ಕು ಪತ್ರ ನೀಡಲಿಲ್ಲ. ಈಗ ಬಿಜೆಪಿ ಹಕ್ಕುಪತ್ರ ನೀಡಿದಾಗ ಕಾಂಗ್ರೆಸ್ ನವರಿಗೆ ಜ್ಞಾನೋದಯವಾಗಿದೆ. ಬಂಜಾರ ಸಮುದಾಯವರಿಗೆ ನ್ಯಾಯ ಕೊಡಿಸುವ ಬಿಜೆಪಿ ಕಾರ್ಯಕ್ರಮದ ಯಶಸ್ಸು ನೋಡಿ‌ ಹೊಟ್ಟೆ ಉರಿದಿದೆ. ಅದಕ್ಕಾಗಿ ಈ ರೀತಿ ಸಲ್ಲದ ಟೀಕೆ ಮಾಡುತ್ತಿದ್ದಾರೆ ಎಂದು ಹೇಳಿದರು.

ಮೋದಿ ಅವರು ಸಿದ್ದರಾಮಯ್ಯ ಅವರಿಗೆ ಭಯಪಡುತ್ತಾರೆ ಎಂಬುದು ಈ ವರ್ಷದ ಹೊಸ ಜೋಕ್. ವಿಶ್ವದಲ್ಲೇ ಪ್ರಭಾವಿಯಾದ ಮೋದಿ ಅವರು ಇವರಿಗೆ ಭಯಪಡುವುದುಂಟೆ. ಹಾಗೆ ನೋಡಿದರೆ, ಸಿದ್ದರಾಮಯ್ಯ ಅವರನ್ನು ಕಂಡರೆ ಸಣ್ಣ ಹುಡುಗರು ಸಹ ಭಯಪಡುವುದಿಲ್ಲ ಎಂದು ವ್ಯಂಗ್ಯವಾಡಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!